jaggesh
ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕರು, ಲೇಖಕ, ಕಾದಂಬರಿಕಾರ, ನಟ, ಖ್ಯಾತ ಕ್ರೈಂ ಡೈರಿ ಕಾರ್ಯಕ್ರಮ ನಿರೂಪಕ, ಚಿತ್ರಕಥೆ ಬರಹಗಾರ, ಪತ್ರಕರ್ತ, ನಿರೂಪಕ, ಓ ಮನಸೇ ಪತ್ರಿಕೆಯ ಸಂಪಾದಕರೂ ಕೂಡ ಆಗಿದ್ದ ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಅವರು ತಡರಾತ್ರಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಮುಖಂಡರು, ಸಿನಿಮಾ ರಂಗದ ಗಣ್ಯರು ಸಹ ಸಂತಾಪ ಸೂಚಿಸುತ್ತಿದ್ದಾರೆ. ಅದರಂತೆ ಜಗ್ಗೇಶ್ ಅವರು ಕಂಬನಿ ಮಿಡಿದಿದ್ದಾರೆ.
ನಟ ಜಗ್ಗೇಶ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದು, ಬೆಳಗೆರೆ ಅವರಿಗೆ ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ ‘ಯಾರಿಗೂ ಅರ್ಥವಾಗದ ಮನುಷ್ಯ. ಒಮ್ಮೆ ಈತನ ಮಾತು ಸರಿ ಅನಿಸುತ್ತದೆ. ಕೆಲವೊಮ್ಮೆ ಬೇಕಿತ್ತಾ ಈ ಮಾತು ಅನಿಸುತ್ತದೆ. 30 ವರ್ಷದಿಂದ ಬಲ್ಲೆ ಆದರೂ ನನಗೆ ಅರ್ಥವಾಗದ ಮನುಷ್ಯ. ಸಾಮಾನ್ಯ ಅಸಮಾನ್ಯ ಆದದ್ದು ಮಾತ್ರ ಅನುಸರಣೀಯ. ರವಿ ರವರ ಖಾಸಬಾತ್ ಬರವಣಿಗೆ ನನ್ನ ಅಚ್ಚುಮೆಚ್ಚು. ನಿಮ್ಮ ಆತ್ಮಕ್ಕೆ ಶಾಂತಿ’ ಎಂದು ಬರೆದುಕೊಂಡು ಸಂತಾಪ ಸೂಚಿಸಸಿದ್ದಾರೆ.
jaggesh
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel