ಆರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ : ಜಗ್ಗೇಶ್
ಬೆಂಗಳೂರು : ನಾನು ಕಂಡ ಆರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ ಎಂದು ನಟ, ರಾಜಕಾರಣಿ ಜಗ್ಗೇಶ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.
ಆರ್ ಎಸ್ ಎಸ್ ನಿಂದ 4 ಸಾವಿರ ಐಎಎಸ್, ಐಪಿಎಸ್ ಗಳಿಗೆ ಟ್ರೈನಿಂಗ್ ಎಂಬ ಕುಮಾರಸ್ವಾಮಿ ಆರೋಪಕ್ಕೆ ಟ್ವಿಟ್ಟರ್ ನಲ್ಲಿ ಜಗ್ಗೇಶ್ ತಿರುಗೇಟು ನೀಡಿದ್ದಾರೆ.
ನಾನು ಕಂಡ ಅರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ. ಕೊರೋನ ಸಂದರ್ಭವಾಗಲಿ, ನೆರೆಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿಧ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥಸೇವೆ ಮಾಡುವ ಮಾತೃಹೃದಯಿ ಸಂಸ್ಥೆ ಎಂದರೆ ಅದು ಒಂದೆ ಆರ್ ಎಸ್ ಎಸ್..
ಯಾರಿಗೆ ಆ ಸಂಸ್ಥೆಯ ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥಬಿಟ್ಟು ಸಮಾಜಕ್ಕೆ ಹೆಗಲುಕೊಡುವ ಕರ್ಮಯೋಗಿ ಆಗುತ್ತಾನೆ.
ದೂರನಿಂತು ಬೆಟ್ಟ ನೋಡುವರಿಗು ಆ ಬೆಟ್ಟ ಏರಿದವರಿಗು ವಿವರಣೆಗೆ ವ್ಯೆತಾಸ ವುಂಟು! ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು ಕಾರಣ ಅದರ ಮಾತೃರೂಪ ಹಾಗು ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ
ಸಂಘವಿದು.. ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿಧ್ಯಾವಂತರು ರಾಷ್ಟ್ರಪ್ರೇಮಿಗಳು, ಆತ್ಮಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು.. ಅವರಿಗೆ ದೇಶವೆ ಮನೆ ದೇಶವಾಸಿಗಳೆ ಬಂಧುಗಳು. ಅವರ ನಿಸ್ವಾರ್ಥ ಸಮಾಜಸೇವೆಯೇ ದೇವರ ಪೂಜೆ. ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥಗುಣ ಅರಿಯಿರಿ ಎಂದು ಕುಮಾರಸ್ವಾಮಿಗೆ ಜಗ್ಗೇಶ್ ಟಾಂಗ್ ನೀಡಿದ್ದಾರೆ.