ಬೆಂಗಳೂರು: ಡ್ರಗ್ಸ್ ಜಾಲದ ನಂಟಿನ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಡ್ರಗ್ಗಿಣಿಯರಾದ ರಾಗಿಣಿ ಹಾಗೂ ಸಂಜನಾಗೆ ಸೋಮವಾರದವರೆಗೆ ಜೈಲೂಟ ಖಾಯಂ ಆಗಿದೆ.
ಇಂದು ಬೆಂಗಳೂರಿನ ಎನ್ಡಿಪಿಎಸ್ ಕೋರ್ಟ್ನಲ್ಲಿ ರಾಗಿಣಿ, ಸಂಜನಾ, ಶಿವಪ್ರಕಾಶ್ ಸೇರಿ 5 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಾಯಿತು. ಆದರೆ, ಆರೋಪಿಗಳ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು. ಎಲ್ಲಾ ಆರೋಪಿಗಳ ಜಾಮೀನು ಅರ್ಜಿಗಳಿಗೂ ಪ್ರತ್ಯೇಕವಾಗಿ ಆಕ್ಷೇಪಣೆ ಸಲ್ಲಿಸಬೇಕಿದೆ ಎಂದು ಸಿಸಿಬಿ ಪರ ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಡ್ರಗ್ಸ್ ಕೇಸಲ್ಲಿ ಇನ್ನೂ ಕೆಲವರ ವಿಚಾರಣೆ ನಡೆಯುತ್ತಿದ್ದು, ತನಿಖೆ ಮುಂದುವರೆದಿದೆ. ತನಿಖಾಧಿಕಾರಿಗಳಿಂದ ಇನ್ನಷ್ಟು ವರದಿ ಬರಬೇಕಿದೆ. ಇನ್ನೂ ಕೆಲವರಿಗೆ ನೋಟಿಸ್ ನೀಡಬೇಕಿದೆ. ಕೆಲವೊಂದು ವರದಿಗಾಗಿ ಕಾಯುತ್ತಿದ್ದೇವೆ, ವರದಿ ಬಂದ ನಂತರ ಆಕ್ಷೇಪಣೆ ಸಲ್ಲಿಕೆ ಮಾಡಲಾಗುವುದು ಎಂದು ಸಿಸಿಬಿ ಪರ ವಕೀಲರು ಕೋರ್ಟ್ಗೆ ಮನವರಿಕೆ ಮಾಡಿದರು.
ಈ ಹಿನ್ನೆಲೆಯಲ್ಲಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶರು ಸೋಮವಾರಕ್ಕೆ ಮುಂದೂಡಿದ್ದಾರೆ. ಹೀಗಾಗಿ ಇಬ್ಬರೂ ನಟಿಯರಿಗೆ ಸೋಮವಾರದವರೆಗೂ ಪರಪ್ಪನ ಅಗ್ರಹಾರ ಜೈಲುವಾಸ ಖಾಯಂ ಆಗಿದೆ.
ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!
ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...








