ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

James ಪ್ರೀ ರಿಲೀಸ್ ಈವೆಂಟ್ : ಅಪ್ಪು ಅಗಲಿಕೆ ಯಾರಿಗೂ ಅರಗಿಸಿಕೊಳ್ಳಲು ಆಗಿಲ್ಲ : ವೇದಿಕೆ ಮೇಲೆ ಭಾವುಕರಾದ ಶಿವಣ್ಣ

Namratha Rao by Namratha Rao
March 14, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

James ಪ್ರೀ ರಿಲೀಸ್ ಈವೆಂಟ್ : ಅಪ್ಪು ಅಗಲಿಕೆ ಯಾರಿಗೂ ಅರಗಿಸಿಕೊಳ್ಳಲು ಆಗಿಲ್ಲ : ವೇದಿಕೆ ಮೇಲೆ ಭಾವುಕರಾದ ಶಿವಣ್ಣ

ಮಾರ್ಚ್ 17 ಕ್ಕೆ ಅಪ್ಪು ಬರ್ತ್ ಡೇ ಪ್ರಯುಕ್ತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಸಿನಿಮಾ ಜೇಮ್ಸ್ ಅದ್ಧೂರಿಯಾಗಿ ವಿಶ್ವಾದ್ಯಂತ ತೆರೆಕಾಣಲಿದೆ.. ಸಿನಿಮಾ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ.. ಸಿನಿಮಾದ ಪ್ರೀ ರಿಲೀಸ್ ಈವೆಂಟ್ ಅದ್ಧೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮವು ಸಂಪೂರ್ಣ ಅಪ್ಪುಮಯವಾಗಿತ್ತು..  ಬಾಗವಹಿಸಿದವರೆಲಲ್ಲರೂ ಭಾವುಕರಾಗಿದ್ದರು.. ಆಂಕರ್ ಅನುಶ್ರೀ ಸಹ ಭಾವುಕರಾಗಿಯೇ ಕಾರ್ಯಕ್ರಮ ಶುರು ಮಾಡಿದ್ದರು..

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಅದ್ರಲ್ಲೂ ಶಿವರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್ ಅವರು ಪುನೀತ್ ರಾಜ್ ಕುಮಾರ್ ಅವರನ್ನ ನೆನೆದು ವೇದಿಕೆ ಮೇಲೆಯೇ ಕಣ್ಣೀರಿಟ್ಟಿದ್ದು , ಇಡೀ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರೆಲ್ಲರ ಕಣ್ಣು ಒದ್ದೆಯಾಗುವಂತೆ ಮಾಡಿತ್ತು..  ವೇದಿಕೆ ಮೇಲೆ ಮೊದಲಿಗೆ ಭಾವುಕರಾಗಿ ಏನೂ ಮಾತನಾಡಲಾಗದೇ ನಿಂತಿದ್ದ ಶಿವಣ್ಣ ಅವರು ನಂತರ ಮಾತನಾಡಿದ  ಕಾರ್ಯಕ್ರಮದಲ್ಲಿ ಬಾಗಿಯಾದವರಿಗೆ , ಜೇಮ್ಸ್ ಸಿನಿಮಾದ ನಟರಿಗೆ, ತಂತ್ರಜ್ಞರಿಗೆ ಅಭಿನಂದಿಸಿದರು. ”ರಾಘು ಮಾತನಾಡಿದ್ದು ನೋವು ಜಾಸ್ತಿಯಾಯಿತು. ಇವರು ನನಗಿಂತ ಚಿಕ್ಕವರು. ನಾನು ಹೇಗೆ ಇದನ್ನೆಲ್ಲಾ ನೋಡುತ್ತಾ ಇರಬೇಕು..  ಹೊರಗಿನಿಂದ ನೋಡುವುದಕ್ಕೆ ಚೆನ್ನಾಗಿಯೇ ಇರುತ್ತೇವೆ. ಶೂಟಿಂಗ್‌ ನಲ್ಲಿ ಭಾಗವಹಿಸುತ್ತೇವೆ, ಹಾಡುತ್ತೇವೆ, ಕುಣಿಯುತ್ತೇವೆ, ಡಬ್ಬಿಂಗ್ ಮಾಡುತ್ತೇವೆ. ಆದರೆ ಆ ನೋವು ಒಳಗಡೆಯೇ ಇದೆ. ಪುನೀತ್‌ ಅಕಾಲಿಕವಾಗಿ ನಮ್ಮನ್ನು ಬಿಟ್ಟು ಹೋದ, ರಾಘು ಆರೋಗ್ಯ ಹೀಗೆ ಆಯಿತು. ಇವರು ನನಗಿಂತಲೂ ಸಣ್ಣವರು ಇವರನ್ನು ಹೀಗೆಲ್ಲ ನೋಡುವುದು ನನಗೆ ಹೇಗೆ ತಾನೆ ಸಾಧ್ಯ ಎಂದು ಮತ್ತೆ ಭಾವುಕರಾದರು.

 

ನಾವು ಐದು ಜನ ಸಹೋದರ-ಸಹೋದರಿಯರು ಒಟ್ಟಿಗೆ ಇದ್ದೆವು, ಈಗ ನಮ್ಮ ಜೊತೆ ಒಬ್ಬ ಇಲ್ಲ ಅದರಲ್ಲೂ ಚಿಕ್ಕವನಾಗಿದ್ದ ಅಪ್ಪು ಹೋಗಿದ್ದು ಎಂದೂ ಮಾಸದ ನೋವು. ಅಪ್ಪು ಎಲ್ಲರ ಮುದ್ದಿನ ಮಗನಾಗಿದ್ದ. ಎಲ್ಲರಿಗೂ ಅವನೆಂದರೆ ಅಚ್ಚು-ಮೆಚ್ಚು. ಅವನ ಅಗಲಿಕೆ ಯಾರಿಗೂ ಅರಗಿಸಿಕೊಳ್ಳಲು ಆಗಿಲ್ಲ. ಅಪ್ಪ-ಅಮ್ಮ ನಮ್ಮ ಜೊತೆ ನೂರಾರು ವರುಷ ಇರ್ತಾರೆ ಅಂದುಕೊಂಡಿದ್ದೆ. ಅವರು ಹೋಗಿಬಿಟ್ಟರು. ಆ ದುಃಖದಿಂದ ಚೇತರಿಸಿಕೊಳ್ಳುವ ಹೊತ್ತಿಗೆ ಅಪ್ಪು ಹೋಗಿಬಿಟ್ಟ ಎಂದು ಕಣ್ಣೀರಿಟ್ಟಿದ್ದಾರೆ. ಇದೇ ವೇಳೆ ಜೇಮ್ಸ್ ಸಿನಿಮಾಗೆ ಡಬ್ಬಿಂಗ್‌ ಮಾಡಿದ ಬಗ್ಗೆ ಮಾತನಾಡಿದ ಶಿವಣ್ಣ, ಜೇಮ್ಸ್  ಸಿನಿಮಾಕ್ಕೆ ಡಬ್ಬಿಂಗ್ ಮಾಡಲು ಬಹಳ ಕಷ್ಟವಾಯಿತು. ಯಾವ ನಟನಿಗೂ ಇನ್ನೊಬ್ಬ ವ್ಯಕ್ತಿ ಧ್ವನಿ ನೀಡಲಾಗದು. ಅದರಲ್ಲೂ ಇಂಥಹ ಸನ್ನಿವೇಶದಲ್ಲಿ ಧ್ವನಿ ನೀಡುವುದು ಅದೂ ಸ್ವಂತ ತಮ್ಮನಿಗೆ ಧ್ವನಿ ನೀಡುವುದು ಬಹಳ ನೋವಿನ ಸಂಗತಿ. ಆದರೂ ಡಬ್ಬಿಂಗ್ ಮಾಡಿದ್ದೇನೆ.   ಇಬ್ಬರೂ ಸೇರಿ ಒಟ್ಟಿಗೆ ಸಿನಿಮಾ ಮಾಡಬೇಕು ಎಂಬುದು ನಮ್ಮ ಬಹು ವರ್ಷಗಳ ಕನಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಕತೆಗಳನ್ನು ಕೇಳುತ್ತಲೇ ಇದ್ದೆವು. ಆದರೆ ಅದು ಸಾಧ್ಯವೇ ಆಗಲಿಲ್ಲ ಎಂದಿದ್ದಾರೆ.

ಅಲ್ಲದೇ  ಇದೇ ವೇಳೆ  ಒಬ್ಬ ತೆಲುಗು ನಿರ್ದೇಶಕರು ಕತೆ ಹೇಳಿದ್ದಾರೆ. ಆ ಸಿನಿಮಾದಲ್ಲಿ ನನ್ನನ್ನು ಅಪ್ಪುವನ್ನು ನೀವು ಒಟ್ಟಿಗೆ ನೋಡುತ್ತೀರ. ಆ ಸಿನಿಮಾ ನನ್ನ ಕಡೆಯಿಂದ ಅಪ್ಪುಗೆ ಡೆಡಿಕೇಶನ್ ಆಗಿರುತ್ತದೆ  ಎಂದು ಹೇಳಿದ್ದಾರೆ.  ಇನ್ನೂ ಜೇಮ್ಸ್ ಸಿನಿಮಾದ ಬಿಡುಗಡೆ ದಿನ ನಾನು ಮೈಸೂರಿನಲ್ಲಿರುತ್ತೇನೆ. ಅಲ್ಲಿಯೇ ಸಿನಿಮಾ ನೋಡುತ್ತೇನೆ ಎಂದು  ಹೇಳಿದ್ದಾರೆ. ಅಷ್ಟೇ ಅಲ್ಲದೇ  ಸಿನಿಮಾದ 25ನೇ ದಿನಕ್ಕೆ ಹೊಸಪೇಟೆಗೆ ಹೋಗಿ ಅಲ್ಲಿ ಕಾರ್ಯಕ್ರಮ ಮಾಡುವುದಾಗಿಯೂ ಶಿವಣ್ಣ ಹೇಳಿಕೊಂಡಿದ್ದಾರೆ.. ಜೇಮ್ಸ್ ಸಿನಿಮಾ ವಿಶ್ವಾದ್ಯಂತ 15 ಕ್ಕೂ ಹೆಚ್ಚು ದೇಶಗಳಲ್ಲಿ 4000 ಕ್ಕೂ ಅಧಿಕ ಸಿನಿಮಾ ಮಂದಿರಗಳಲ್ಲಿ ರಿಲೀಸ್ ಆಗಲಿದೆ.. ಈಗಾಗಲೇ ಾನ್ ಲೈನ್ ಬುಕಿಂಗ್ ಓಪನ್ ಆಗಿದ್ದು , ಆಲ್ ಮೋಸ್ಟ್ ಎಲ್ಲಾ ಶೋಗಳ ಟಿಕೆಟ್ ಗಳು  ಸೋಲ್ಡ್ ಆಗಿದೆ.. ಥಿಯೇಟರ್ ಗಳ ಮುಂದೆ ಅಪ್ಪು ಕಟೌಟ್ ರಾರಾಜಿಸುತ್ತಿವೆ..

Tags: #saakshatvjamesPuneeth RajkumarSandalwoodshivarajkumar
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram