ಉಗ್ರರಿಗೆ ನೆರವು ನೀಡಿದ ಪ್ರಕರಣ – ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಸೇವೆಯಿಂದ ವಜಾ..!
ಉಗ್ರರಿಗೆ ನೆರವು ನೀಡಿದ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತವು ಸೇವೆಯಿಂದ ವಜಾಗೊಳಿಸಿದೆ.
ಭಯೋತ್ಪಾದನೆ ನೆರವು ಪ್ರಕರಣ ಸಂಬಂಧ ಎನ್ಐಎ ಬಂಧಿಸಿ, ಆರೋಪಪಟ್ಟಿಯನ್ನು ದಾಖಲಿಸಿದ್ದ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಸೇವೆಯಿಂದ ವಜಾಗೊಂಡಿದ್ದಾರೆ.
ತಕ್ಷಣದಿಂದ ಜಾರಿಗೆ ಬರುವಂತೆ ಸಂವಿಧಾನದ ವಿಧಿ 311ರ ಅನುಸಾರ ದೇವೇಂದರ್ ಸಿಂಗ್ ರನ್ನ ಸೇವೆಯಿಂದ ವಜಾ ಮಾಡಿರೋದಾಗಿ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ. ಇದರ ಆಧಾರದಲ್ಲಿ ಜಮ್ಮುವಿನ ಸಾಮಾನ್ಯ ಆಡಳಿತ ವಿಭಾಗವು ವಜಾ ಆದೇಶವನ್ನು ನೀಡಿದೆ.
ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್ ನ ಉಗ್ರರು ಕಾಶ್ಮೀರದಿಂದ ಜಮ್ಮುವಿಗೆ ಬರಲು ದೇವೇಂದರ್ ಸಿಂಗ್ ನೆರವಾಗಿದ್ದರು ಎಂಬ ಆರೋಪವಿದೆ. ಹೀಗಾಗಿ ಇವರನ್ನ ಕಳೆದ ವರ್ಷದ ಜನವರಿಯಲ್ಲಿ ಬಂಧಿಸಲಾಗಿತ್ತು. NIA ಈ ಪ್ರಕರಣದ ತನಿಖೆಯನ್ನ ಕೈಗೆತ್ತುಕೊಂಡಿತ್ತು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ