ರಾಯಚೂರು : ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವ ಸಂದರ್ಭ ಬಂದರೆ ಬೆಂಬಲಿಸಲು ನಾನು ಸಿದ್ಧ ಎಂದು ಕೆ.ಆರ್.ಪಿ (KRP) ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ (Janardhan Reddy) ಹೇಳಿದ್ದಾರೆ.
ರಾಯಚೂರಿನ ಲಿಂಗಸುಗೂರಿನಲ್ಲಿ ಕೆಆರ್ ಪಿ ಪಕ್ಷದ ಅಭ್ಯರ್ಥಿ ಆರ್.ರುದ್ರಯ್ಯ ಅವರ ಪರ ಪ್ರಚಾರ ನಡೆಸಿದ ಅವರು, ಪ್ರಾಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದರೆ, ಸಿದ್ದರಾಮಯ್ಯ ಸಿಎಂ ಆಗುತ್ತಾರೆಂದರೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರಿಂದಲೇ ಈ ದೇಶಕ್ಕೆ ರಕ್ಷಣೆಯಾಗುತ್ತಿದೆ ಎನ್ನುವ ರೀತಿ ಮಾತನಾಡುತ್ತಿದ್ದಾರೆ. ದೆಹಲಿಯಿಂದ ದೊಡ್ಡ ದೊಡ್ಡ ನಾಯಕರು ಬಂದು ಮಾತನಾಡುತ್ತಿದ್ದಾರೆ. ಡಂಬಲ್ ಇಂಜಿನ್ ಸರ್ಕಾರ ಅಂತ ಮಾತನಾಡುತ್ತಿದ್ದಾರೆ. ಅದು ಇದ್ದರೂ ರಾಜ್ಯದಲ್ಲಿ ಯಾವ ಸಾಧನೆಯಾಗಿದೆ ಎಂದು ಪ್ರಶ್ನಿಸಿದರು.
ಇಡೀ ರಾಜ್ಯವನ್ನು ಬಿಜೆಪಿ ಸರ್ವ ನಾಶ ಮಾಡಿದೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಒಂದೂ ಒಳ್ಳೆಯ ಕೆಲಸ ಮಾಡಿಲ್ಲ. ಬಿಜೆಪಿ ಇನ್ನೂ ಮೂರು ದಿನದಲ್ಲಿ ಖಾಲಿಯಾಗುತ್ತದೆ.. ದೊಡ್ಡ ದೊಡ್ಡ ಕನಸುಗಳನ್ನ ತೋರಿಸಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ. ಹಿಂದುತ್ವದ ಆಧಾರದ ಮೇಲೆ ಮತಗಳನ್ನು ಕೇಳಿ, ಸಮಾಜವನ್ನು ಒಡೆಯುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಗುಡುಗಿದರು.
ಬಿಜೆಪಿಯಲ್ಲಿನ ತತ್ವ-ಸಿದ್ಧಾಂತ ಮಣ್ಣು ಪಾಲಿಗೆದ. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ಯಡಿಯೂರಪ್ಪರನ್ನ ಸಿಎಂ ಮಾಡಲು ಶ್ರಮಿಸಿದ್ದೇವೆ. ವಾಜಪೇಯಿ, ಅಡ್ವಾಣಿ, ಸುಷ್ಮಾಸ್ವರಾಜ್ ನಮ್ಮನ್ನು ಮಕ್ಕಳ ರೀತಿ ನೋಡುತ್ತಿದ್ದರು. ಆದರೆ, ಇವರೆಲ್ಲ ಹಾಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.