ಜೆಡಿಎಸ್ ಗೆ ಎಂಎಲ್ ಸಿ ಸಂದೇಶ್ ನಾಗರಾಜ್ ಗುಡ್ ಬೈ Sandesh Nagaraj saaksha tv
ಬೆಂಗಳೂರು : ಮಾಜಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ಶ್ರೀನಿವಾಸ್ ಗೌಡ ಈಗಾಗಲೇ ಜೆಡಿಎಸ್ ನಿಂದ ದೂರ ಉಳಿದಿದ್ದಾರೆ.
ಈ ಮಧ್ಯ ವಿಧಾನ ಪರಿಷತ್ ನ ಸದಸ್ಯ ಸಂದೇಶ್ ನಾಗರಾಜ್ ಕೂಡ ಜೆಡಿಎಸ್ ಗೆ ಗುಡ್ ಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಸಂದೇಶ್ ನಾಗರಾಜ್, ಬಿಜೆಪಿ ಸೇರುವುದಾಗಿ ತಿಳಿದುಬಂದಿದೆ.
ಸಂದೇಶ್ ನಾಗರಾಜ್ ಅವರ ಪರಿಷತ್ ಸದಸ್ಯತ್ವದ ಅವಧಿ ಇದೇ ಡಿಸೆಂಬರ್ ಗೆ ಅಂತ್ಯವಾಗಲಿದೆ.
ಇದರ ನಡುವೆ ಅವರು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮುನಿಸಿಕೊಂಡಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಒಲವು ತೋರಿದ್ದಾರಂತೆ.
ಇದಕ್ಕೆ ಪುಷ್ಠಿ ನೀಡುವಂತೆ ಇಂದು ಸಂದೇಶ್ ನಾಗರಾಜ್ ಅವರು ನಗರದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.