JDS | ಮಂಡ್ಯದಲ್ಲಿ ಜೆಡಿಎಸ್ ರಣ ಕಹಳೆ
ಮಂಡ್ಯ : ಸಕ್ಕರೆ ನಾಡು ಮಂಡ್ಯದ ನಾಗಮಂಗಲದಲ್ಲಿ ಜೆಡಿಎಸ್ ಪಕ್ಷ ರಣ ಕಹಳೆ ಮೊಳಗಿಸಿದೆ.
ಮುಂದಿನ ವಿಧಾನಸಭೆ ಚುನಾವಣೆಗೆ ಇಂದಿನಿಂದ ಜೆಡಿಎಸ್ ತಯಾರಿ ಆರಂಭಿಸಿದೆ.
ನಾಗಮಂಗಲದ ಸೋಮನಹಳ್ಳಿ ಅಮ್ಮನ ದೇವಾಲಯದ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆಯುತ್ತಿದೆ.
ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವರಾದ ಸಿಎಂ ಇಬ್ರಾಹಿಮ್, ಎಚ್.ಡಿ.ರೇವಣ್ಣ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಈ ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾವೇ ಬೈಕ್ ರ್ಯಾಲಿ ಆರಂಭವಾಗಿದೆ.
ನಾಗಮಂಗಲದ ಟಿಬಿ ವೃತ್ತದಿಂದ ಸೋಮನಹಳ್ಳಿ ಅಮ್ಮನ ದೇವಾಲಯದವರೆಗೆ ಬೈಕ್ ರ್ಯಾಲಿ ನಡೆಯಿತು.
ಬೈಕ್ ರ್ಯಾಲಿ ಮೂಲಕ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಜೆಡಿಎಸ್ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ.
ಇನ್ನು ಸಮಾವೇಶದಲ್ಲಿ 40 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಮಾವೇಶದ ಮೂಲಕ ಪಕ್ಷ ಸಂಘಟನೆಗೆ ಜೆಡಿಎಸ್ ಚಾಲನೆ ನೀಡಲಿದೆ.