ಋಷಿಕೇಶ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ನೀಡಿದ ಜೆಎಂಎಫ್ಸಿ ನ್ಯಾಯಾಲಯ Saaksha Tv
ಮಂಡ್ಯ: ವಿವಾದಾತ್ಮಕ ಹೇಳಿಕೆ ನೀಡಿ ವೀಡಿಯೋ ವೈರೆಲ್ ಮಾಡಿ ಬಂಧಿತನಾಗಿದ್ದ ಕಾಳಿಮಠದ ಋಷಿಕೇಶಿ ಸ್ವಾಮಿಜಿಗೆ ಶ್ರೀರಂಗಪಟ್ಟಣದ ಜೆಎಂಎಫ್ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ರೀತಿಯಲ್ಲಿ ಕೆಡುವಬೇಕು ಎಂದು ವಿವಾದಾತ್ಮಕ ಹೇಳಿಕೆ ಹೇಳಿಕೆ ನೀಡಿ ಸಮಾಜದ ಕೋಮು ಸೌಹಾರ್ದಕ್ಕೆ ದಕ್ಕೆ ತರುವಂತಹದ್ದು ಎಂದು ಚಿಕ್ಕಮಗಳೂರಿನ ಕಾಳಿಮಠದಿಂದ ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದರು.
ಸ್ವಾಮೀಜಿಯವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಸ್ವಾಮೀಜಿಯನ್ನು ಜೈಲಿಗೆ ಕಳಿಸಲಾಗಿತ್ತು. ಇಂದು ಜಾಮೀನು ಅರ್ಜಿ ವಿಚಾರಣೆ ಸಂಬಂಧ ತೀರ್ಪು ನೀಡಿರುವ ಶ್ರೀರಂಗಪಟ್ಟಣದ ಜೆಎಂಎಫ್ಸಿ ನ್ಯಾಯಾಲಯವು ಋಷಿಕೇಶ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ನೀಡಿದೆ.
.