ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ರಾಹು- ಕೇತುವಿನ ಪ್ರಭಾವವು ಹೇಗೆ ಕಾಳ ಸರ್ಪದೋಷಕ್ಕೆ ಕಾರಣವಾಗುತ್ತೆ ಗೊತ್ತಾ?

Namratha Rao by Namratha Rao
October 28, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ರಾಹು- ಕೇತುವಿನ ಪ್ರಭಾವವು ಹೇಗೆ ಕಾಳ ಸರ್ಪದೋಷಕ್ಕೆ ಕಾರಣವಾಗುತ್ತೆ ಗೊತ್ತಾ?

ಹಿಂದೂ ಧರ್ಮದಲ್ಲಿ ಹಾವುಗಳಿಗೆ ವಿಶೇಷ ಸ್ಥಾನ ಹಾಗೂ ಗೌರವವನ್ನು ನೀಡಲಾಗುತ್ತದೆ. ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಹಾವುಗಳು ದೇವತೆಗಳೊಂದಿಗೆ ನಿಕಟ ಸಂಬಂಧವನ್ನು ಪಡೆದುಕೊಂಡಿವೆ. ನಾಗರ ಹಾವು ಮತ್ತು ಕಾಳ ಸರ್ಪವು ಅತ್ಯಂತ ಶಕ್ತಿಯುತವಾದ ಹಾಗೂ ದೈವ ಶಕ್ತಿಯನ್ನು ಪಡೆದಿರುವ ಸರೀಸೃಪ. ಇವುಗಳನ್ನು ಸಾಯಿಸುವುದು ಅಥವಾ ಹಿಂಸಿಸುವುದು ಮಾಡಿದರೆ ನಮ್ಮ ಜನ್ಮಕ್ಕೆ ಕಳಂಕ ಹಾಗೂ ಮಹಾ ಪಾಪ ಅಂಟಿಕೊಳ್ಳುವುದು. ಒಮ್ಮೆ ಹಾವು ದ್ವೇಷವನ್ನು ಹೊಂದಿದ್ದರೆ 12 ವರ್ಷಗಳ ಕಾಲ ಕಾಯುವುದು.

Related posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

March 12, 2026
ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

March 12, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ದೀರ್ಘ ಸಮಯದ ನಂತರವಾದರೂ ಅಂದುಕೊಂಡ ಶಿಕ್ಷೆಯನ್ನು ನೀಡುವುದು ಎಂದು ನಂಬಲಾಗಿದೆ. ಕಾಳ ಸರ್ಪದೋಷವೆಂದು ನೀವು ಕೇಳಿರಬಹುದು, ಇದು ಮುಖ್ಯವಾಗಿ ಜನ್ಮಕುಂಡಲಿಯಲ್ಲಿನ ರಾಹು- ಕೇತುವಿನ ಸ್ಥಾನದಿಂದಾಗಿ ಕಂಡು ಬರುವ ದೋಷ. ಈ ದೋಷಗಳಲ್ಲೂ ಹಲವು ವಿಧಗಳಿವೆ ಅವು ಯಾವುವು ಹಾಗೂ ದೋಷ ನಿವಾರಣಾ ಪರಿಹಾರ ಕ್ರಮಗಳೇನು ಎನ್ನುವುದರ ಕುರಿತು ಇಲ್ಲಿದೆ ಮಾಹಿತಿ.

ವ್ಯಕ್ತಿ ತನ್ನ ಜನ್ಮ ಕುಂಡಲಿಯ ಆಧಾರದ ಮೇಲೆ ಸರ್ಪ ಅಥವಾ ಕಾಳ ಸರ್ಪ ದೋಷ ಇರುವುದನ್ನು ಕಂಡುಕೊಳ್ಳಬಹುದು. ನಂತರ ಅದಕ್ಕೆ ಸೂಕ್ತ ಪರಿಹಾರ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ತಲೆ ದೂರುತ್ತವೆ. ಯಾರು ತಮ್ಮ ಜಾತಕ ಅಥವಾ ಕುಂಡಲಿಯನ್ನು ಹೊಂದಿರುವುದಿಲ್ಲವೋ ಅವರು ಸಹ ಕೆಲವು ಸೂಚನೆಗಳೊಂದಿಗೆ ಕಾಳ ಸರ್ಪ ದೋಷ ಇರುವುದನ್ನು ಗುರುತಿಸಿಕೊಳ್ಳಬಹುದು.

ನಿಜ, ನಿದ್ರೆಯಲ್ಲಿರುವಾಗ ಹಾವುಗಳ ಕನಸು ಕಾಣುವುದು, ಕನಸಿನಲ್ಲಿ ಮನೆಯು ಸಂಪೂರ್ಣವಾಗಿ ನೀರಿನಿಂದ ಮುಳುಗಿದಂತೆ ಕಾಣುವುದು, ಯಾರೋ ಅಪರಿಚಿತರು ತೊಂದರೆ ಕೊಡುವಂತೆ, ಮನೆಯು ಕಳ್ಳತನಕ್ಕೆ ಒಳಗಾಗಿರುವಂತೆ, ಆಸ್ತಿ ಪಾಸ್ತಿ ನಾಶ ಹೊಂದಿರುವಂತೆ, ಆಪ್ತರು ಸಾವನ್ನು ಕಂಡಂತೆ ಹೀಗೆ ವಿವಿಧ ಬಗೆಯಲ್ಲಿ ಅಹಿತಕರವಾದ ಕನಸುಗಳು ಆಗಾಗ ಕಾಡುತ್ತಲೇ ಇರುತ್ತವೆ ಎಂದಾದರೆ ಅವರ ಜನ್ಮ ಕುಂಡಲಿಯಲ್ಲಿ ಕಾಳ ಸರ್ಪ ತೊಂದರೆ ಇದೆ ಎಂದು ಸುಲಭವಾಗಿ ನಿರ್ಧರಿಸಬಹುದು. ನಾಗ ಮತ್ತು ಕಾಳ ಸರ್ಪ ದೋಷ ಇರುವವರಿಗೆ ಮಾತ್ರ ಇಂತಹ ಕನಸುಗಳು ಕಾಣಿಸಿಕೊಳ್ಳುತ್ತವೆ ಎನ್ನಲಾಗುವುದು. ಕುಂಡಲಿಯಲ್ಲಿ ರಾಹು ಕೇತುಗಳ ಪ್ರಭಾವ

ನಮ್ಮ ಕುಂಡಲಿಯಲ್ಲಿ ಇರುವ ಕಾಳ ಸರ್ಪ ದೋಷವು ಬದುಕಿನ ನೆಮ್ಮದಿ, ಯಶಸ್ಸು, ಆರ್ಥಿಕ ಸಮಸ್ಯೆಯನ್ನು ಹೆಚ್ಚಿಸುತ್ತವೆ. ಈ ದೋಷವು ರಾಹು ಮತ್ತು ಕೇತು ಗ್ರಹಗಳಿಂದ ಉಂಟಾಗುವುದು ಎಂದು ಹೇಳಲಾಗುವುದು. ಅಂದರೆ ಕುಂಡಲಿಯಲ್ಲಿ 1, 2, 5, 8ನೇ ಮನೆಯಲ್ಲಿ ರಾಹು-ಕೇತು ಇದ್ದರೆ ಅದನ್ನು ಕಾಳ ಸರ್ಪ ದೋಷ ಎಂದು ಪರಿಗಣಿಸಲಾಗುತ್ತದೆ.

1 ಮತ್ತು 2 ನೇ ಮನೆಯಲ್ಲಿ ರಾಹುಗಳಿದ್ದರೆ ವಿವಾಹ ಯೋಗವು ದೀರ್ಘ ವರ್ಷದ ನಂತರ ಬರುವುದು. 5ನೇ ಮನೆಯಲ್ಲಿ ಇದ್ದರೆ ತಡವಾದ ಸಂತಾನ ಭಾಗ್ಯ, 7ನೇ ಮನೆಯಲ್ಲಿ ಇದ್ದರೆ ಲೈಂಗಿಕ ಅಥವಾ ಸಂಸಾರದಲ್ಲಿ ಸಾಕಷ್ಟು ತೊಂದರೆ ಮತ್ತು ಕಷ್ಟಗಳು ಎದುರಾಗುತ್ತವೆ. 8ನೇ ಮನೆಯಲ್ಲಿ ಇದ್ದರೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ಹೇಳಲಾಗುವುದು.

ವಿವಿಧ ಬಗೆಯ ಕಾಳಸರ್ಪ ಯೋಗ
ಸರ್ಪ ಎಂದರೆ ಅದೊಂದು ವಿಷದಿಂದ ಕೂಡಿರುವ ಭಯಾನಕ ಪ್ರಾಣಿ. ಇದು ದೈವ ಶಕ್ತಿಯನ್ನು ಹೊಂದಿರುವುದರಿಂದ ಇದನ್ನು ಹೊಡೆದರೆ ಅಥವಾ ಹಿಂಸೆಯನ್ನು ಮಾಡಿದರೆ ಅದರಿಂದ ಅಧಿಕ ಪಾಪಕರ್ಮಗಳು ಸುತ್ತಿಕೊಳ್ಳುತ್ತವೆ.

ಅವು ಏಳು ಜನ್ಮದ ವರೆಗೂ ಕಾಡುತ್ತವೆ ಎಂದು ಹೇಳಲಾಗುವುದು. ಅನಂತ, ವಾಸುಕಿ, ಪದ್ಮನಾಭ, ಕುಳಿಕ, ಶಂಕಪಾಲ, ಮಹಾ ಪದ್ಮ, ತಕ್ಷಕ, ಶೇಷ, ಘಟಕ ಎನ್ನುವ ಹೆಸರುಗಳನ್ನು ಹೊಂದಿರುವ 9 ಬಗೆಯ ಸರ್ಪಗಳಿವೆ. ರಾಹು ಕೇತುಗಳು ಇರುವ ಮನೆಗಳಿಗೆ ಅನುಗುಣವಾಗಿ ಯಾವ ಸರ್ಪ ದೋಷ ಎಂದು ಗುರುತಿಸಲಾಗುವುದು.

ಅನಂತ ಕಾಳ ಸರ್ಪ ಯೋಗ
ಅನಂತ ಕಾಳ ಸರ್ಪ ಯೋಗವು ಅತ್ಯಂತ ದೀರ್ಘಾವಧಿಯ ಕಾಳ ಸರ್ಪ ಯೋಗ. ಇದು ಸುಮಾರು 27 ವರ್ಷಗಳ ಕಾಲ ಬಾಧಿಸುವುದು ಎಂದು ಹೇಳಲಾಗುತ್ತದೆ. ರಾಹು ಒಂದನೇ ಮನೆಯಲ್ಲಿ ಹಾಗೂ ಕೇತು ಏಳನೇ ಮನೆಯಲ್ಲಿ ಇದ್ದರೆ ಅದನ್ನು ಅನಂತ ಕಾಳ ಸರ್ಪಯೋಗ ಎಂದು ಪರಿಗಣಿಸಲಾಗುವುದು.

ಈ ದೋಷ ಹೊಂದಿದವರು ದೀರ್ಘ ಆರೋಗ್ಯ ಸಮಸ್ಯೆ, ಸಂಸಾರದಲ್ಲಿ ಕಲಹ, ಉದ್ಯೋಗದಲ್ಲಿ ತೊಂದರೆಯನ್ನು ಅನುಭವಿಸುವರು. ಇವರು ಅತ್ಯಂತ ಕೀಳು ಮನೋಭಾವವನ್ನು ಹೊಂದಿರುತ್ತಾರೆ.

ವಾಸುಕಿ ಕಾಳ ಸರ್ಪ ಯೋಗ

ನಮ್ಮ ಕುಂಡಲಿಯ 3ನೇ ಮನೆಯಲ್ಲಿ ರಾಹುವಿನ ವಾಸ ವಿದ್ದು, 9ನೇ ಮನೆಯಲ್ಲಿ ಕೇತು ಕುಳಿತುಕೊಂಡಿದ್ದರೆ ಆಗ ವ್ಯಕ್ತಿಯು ವಾಸುಕಿ ಸರ್ಪ ದೋಷವನ್ನು ಅನುಭವಿಸುವನು. ಅದರಿಂದ ವ್ಯಕ್ತಿ ಅಕಾಲಿಕ ಮರಣ, ಹಣದ ಸಮಸ್ಯೆ, ಸಂಬಂಧಗಳಲ್ಲಿ ತೊಂದರೆಯನ್ನು ಅನುಭವಿಸುವನು.

ಪದ್ಮನಾಭ ಕಾಳ ಸರ್ಪ ಯೋಗ
ಈ ಯೋಗವು ವ್ಯಕ್ತಿಗೆ 48 ವರ್ಷ ಕಾಡುವುದು. ಜನ್ಮ ಕುಂಡಲಿಯ 5ನೇ ಮನೆಯಲ್ಲಿ ರಾಹು ಮತ್ತು 11ನೇ ಮನೆಯಲ್ಲಿ ಕೇತುವಿನ ಆಡಳಿತ ಇದ್ದರೆ ಅದು ಪದ್ಮನಾಭ ಕಾಳ ಸರ್ಪ ಯೋಗ ಎನಿಸಿಕೊಳ್ಳುವುದು. ಈ ಸಮಸ್ಯೆ ಇದ್ದವರಿಗೆ ಸಂತಾನ ಹೀನತೆ ಉಂಟಾಗುವುದು. ಇಲ್ಲವೇ ಮಕ್ಕಳ ಬಗ್ಗೆಯೇ ಅಧಿಕ ಚಿಂತನೆ ನಡೆಸಿ ಮಾನಸಿಕ ತೊಂದರೆಯನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.

ಕುಳಿಕ ಕಾಳ ಸರ್ಪ ಯೋಗ
ಆಗಾಗ ಅಪಘಾತಗಳು, ಆರ್ಥಿಕ ನಷ್ಟ ಅನ್ಯರಿಂದ ತೊಂದರೆ ಉಂಟಾಗುತ್ತಿದ್ದರೆ ಅದನ್ನು ಕುಳಿಕ ಕಾಳ ಸರ್ಪ ಯೋಗ ಎಂದು ಹೇಳಲಾಗುವುದು. 2ನೇ ಮನೆಯಲ್ಲಿ ರಾಹು ಮತ್ತು 8ನೇ ಮನೆಯಲ್ಲಿ ಕೇತು ಇದ್ದರೆ ಅದು ಕುಳಿಕ ಕಾಳ ಸರ್ಪದ ಯೋಗವಾಗಿರುತ್ತದೆ.

ಶಂಕಪಾಲ ಕಾಳ ಸರ್ಪಯೋಗ
ಶಂಕಪಾಲ ಕಾಳ ಸರ್ಪ ಯೋಗವು ಸಾಮಾನ್ಯವಾಗಿ 42 ವರ್ಷಗಳ ಕಾಲ ಕಾಡುವುದು. ರಾಹು 4ನೇ ಮನೆಯಲ್ಲಿ ಹಾಗೂ ಕೇತು 10ನೇ ಮನೆಯಲ್ಲಿ ಇರುವಾಗ ಈ ಸಮಸ್ಯೆ ಉಂಟಾಗುವುದು ಎಂದು ಹೇಳಲಾಗುವುದು. ಈ ದೋಷದಿಂದ ವ್ಯಕ್ತಿ ಸಾಕಷ್ಟು ಆತಂಕ ಹಾಗೂ ಒತ್ತಡದಿಂದ ಜೀವನವನ್ನು ನಡೆಸುವನು.

ಮಹಾಪದ್ಮ ಕಾಳ ಸರ್ಪ ಯೋಗ
ಈ ದೋಷವನ್ನು ವ್ಯಕ್ತಿ 54 ವರ್ಷಗಳ ಕಾಲ ಅನುಭವಿಸಬೇಕಾಗುವುದು. ಕುಂಡಲಿಯ 6ನೇ ಮನೆಯಲ್ಲಿ ರಾಹು ಮತ್ತು 12ನೇ ಮನೆಯಲ್ಲಿ ಕೇತುವಿನ ವಾಸ್ತವ್ಯ ಇರುತ್ತದೆ. ಈ ದೋಷದಿಂದಾಗಿ ವ್ಯಕ್ತಿಯ ಜೀವನದಲ್ಲಿ ಅಧಿಕ ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಅನೇಕ ಖಾಯಿಲೆಯಿಂದ ಬಳಲುತ್ತಾರೆ.

ತಕ್ಷಕ ಕಾಳ ಸರ್ಪ ಯೋಗ
ಈ ಯೋಗದಲ್ಲಿ ವ್ಯಕ್ತಿ ಎಲ್ಲಾ ಬಗೆಯ ವ್ಯಸನಗಳಿಗೂ ಬಲಿಯಾಗುತ್ತಾನೆ. ಇವರ ವ್ಯಸನದಿಂದಾಗಿಯೇ ಸಾಕಷ್ಟು ತೊಂದರೆಗಳು ಉಂಟಾಗುವುದು. ಕುಟುಂಬ ಜೀವನದಲ್ಲಿ ಅಧಿಕ ಸಮಸ್ಯೆಯನ್ನು ಅನುಭವಿಸಬೇಕಾಗುವುದು. ಕುಂಡಲಿಯ 7ನೇ ಮನೆಯಲ್ಲಿ ರಾಹು ಮತ್ತು 1ನೇ ಮನೆಯಲ್ಲಿ ಕೇತು ಇದ್ದರೆ ತಕ್ಷಕ ಕಾಳಸರ್ಪ ಯೋಗ ಎಂದು ಪರಿಗಣಿಸಲಾಗುವುದು.

ಶೇಷ ಕಾಳ ಸರ್ಪಯೋಗ
ಕುಂಡಲಿಯ 12ನೇ ಮನೆಯಲ್ಲಿ ರಾಹು, 6ನೇ ಮನೆಯಲ್ಲಿ ಕೇತು ಇದ್ದರೆ ಶೇಷ ಕಾಳಸರ್ಪ ಯೋಗ ಎನ್ನಲಾಗುತ್ತದೆ. ಈ ಸಮಸ್ಯೆಯ ಪ್ರಭಾವದಿಂದ ವ್ಯಕ್ತಿ ಜೀವನದಲ್ಲಿ ಸಾಕಷ್ಟು ದೌರ್ಭಾಗ್ಯವನ್ನು, ಅನಾರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುವುದು.

ಘಟಕ ಕಾಳ
ಘಟಕ ಕಾಳ ಸರ್ಪಯೋಗವು ಇದ್ದರೆ ವ್ಯಕ್ತಿ ಜೀವನದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷೆಯನ್ನು ಅನುಭವಿಸುವನು. ಕುಂಡಲಿಯ 10ನೇ ಮನೆಯಲ್ಲಿ ರಾಹು ಮತ್ತು 4ನೇ ಮನೆಯಲ್ಲಿ ಕೇತು ಇದ್ದರೆ ಘಟಕ ಕಾಳ ಸರ್ಪಯೋಗವು ಕಾಡುವುದು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕಾಳ ಸರ್ಪ ಯೋಗಕ್ಕೆ ಪರಿಹಾರ ಕ್ರಮಗಳು
ಈ ಯೋಗಗಳು ಅತ್ಯಂತ ಹಾನಿಕಾರಕ ಹಾಗೂ ಸಮಸ್ಯೆಗಳನ್ನು ತಂದೊಡ್ಡುತ್ತವೆ. ಇಂತಹ ಸಮಸ್ಯೆಗಳಿಂದ ಮುಕ್ತಿ ಹೊಂದಲು ಕೆಲವು ಧಾರ್ಮಿಕ ವಿಧಿ ವಿಧಾನಗಳನ್ನು ಕೈಗೊಳ್ಳಬೇಕು.

ಬೆಳ್ಳಿಯಿಂದ ಮಾಡಿದ ಜೋಡಿ ನಾಗ ಹಾಗೂ ಮೊಟ್ಟೆಯನ್ನು ಸುಬ್ರಹ್ಮಣ ದೇವಸ್ಥಾನಕ್ಕೆ ಅಥವಾ ಗರುಡ ಗೋವಿಂದ ದೇವಸ್ಥಾನಕ್ಕೆ ಅರ್ಪಿಸಿ.

ನಿತ್ಯವೂ ಪಂಚಾಕ್ಷರಿ ಮಂತ್ರ, ಮಹಾ ಮೃತ್ಯುಂಜಯ ಜಪವನ್ನು 108 ಬಾರಿ ಮಾಡಬೇಕು. ಅವು ಕುಂಡಲಿಯಲಿರುವ ದೋಷಗಳನ್ನು ನಿಯಂತ್ರಿಸುತ್ತವೆ.

ನಿತ್ಯವೂ 108 ಬಾರಿ ರಾಹುವಿನ ಬೀಜ ಮಂತ್ರವನ್ನು ಜಪಿಸಿ.

ಪ್ರತಿ ಶನಿವಾರ ಅಶ್ವತ್ಥ ಮರಕ್ಕೆ ಪೂಜೆ ಹಾಗೂ ನೀರನ್ನು ಎರೆಯಬೇಕು. ಇದು ಅತ್ಯಂತ ಫಲಪ್ರದವಾದ ಪರಿಣಾಮವನ್ನು ನೀಡುವುದು.

ನಾಗರ ಪಂಚಮಿಯ ದಿನ ಉಪವಾಸ ಕೈಗೊಳ್ಳುವುದು, ಶ್ರೀ ಕೃಷ್ಣ ದೇವರ ಹೆಸರಿನಲ್ಲಿ 11 ತೆಂಗಿನ ಕಾಯನ್ನು ನೀರಿನಲ್ಲಿ ಬಿಡಬೇಕು. ಅದು ಪಂಚಮಿಯ ದಿನ ಸಾಧ್ಯವಾಗದೆ ಇದ್ದರೆ ಶನಿವಾರ ಈ ಕ್ರಮವನ್ನು ಕೈಗೊಳ್ಳಬಹುದು.

ಲೋಹದಿಂದ ಮಾಡಿದ ನಾಗ ಮತ್ತು ನಾಗಿಣಿಯ 108 ಜೋಡಿಯನ್ನು ಶನಿವಾರ ನದಿ ನೀರಿಗೆ ಬಿಡಬೇಕು.

ಸೋಮವಾರ ರುದ್ರಾಭಿಷೇಕ ಮಾಡಿಸಿ.

ನಿತ್ಯವೂ ಕಾಳಸರ್ಪ ಗಾಯತ್ರಿ ಮಂತ್ರವನ್ನು ಜಪಿಸುವುದು ಅತ್ಯಂತ ಫಲಪ್ರದ ವಿಧಾನ. ಇವುಗಳಿಂದ ನಮಗೆ ಅಂಟಿರುವ ದೋಷವನ್ನು ನಿಯಂತ್ರಿಸಬಹುದು ಎಂದು ಹೇಳಲಾಗುವುದು.

Tags: #astrology#saakshatvhoroscopejyothishya
ShareTweetSendShare
Join us on:

Related Posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

by Shwetha
March 12, 2026
0

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ಕೇವಲ ಆರು ತಿಂಗಳಲ್ಲೇ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

​ಕುರಿ ಲೆಕ್ಕ ಹಾಕಲು ಬರಲ್ಲ ಎಂದವರಿಗೆ 17 ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು ಹೇಗೆ :ಅರ್ಥಶಾಸ್ತ್ರ ಓದಿಲ್ಲ ಎಂದರೂ ಕೇಳದೆ ಹಣಕಾಸು ಖಾತೆ ಕೊಟ್ಟಿದ್ದ ದೇವೇಗೌಡ್ರು ಅಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

by Shwetha
March 12, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು, ಅಂದರೆ 17 ಬಾರಿ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಆರಂಭದಲ್ಲಿ ಅವರಿಗೆ ಹಣಕಾಸು ಖಾತೆಯ...

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

by Shwetha
March 12, 2026
0

ಇರಾನ್‌ನ ನೂತನ ಪರಮೋಚ್ಚ ನಾಯಕ ಮುಜ್ತಬಾ ಖಮೇನಿ ಅವರಿಗೆ ಬೆಂಬಲ ಸೂಚಿಸುವ ಮೂಲಕ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜಾಗತಿಕ ರಾಜಕಾರಣದಲ್ಲಿ ಹೊಸ ಹಾಗೂ...

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ  ಎಚ್ಚರಿಕೆ

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ ಎಚ್ಚರಿಕೆ

by Shwetha
March 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದೆ. ವಸತಿ ಸಚಿವ ಬಿ. ಝಡ್. ಜಮೀರ್ ಅಹ್ಮದ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram