K. S. Eshwarappa – ಕಾಂಗ್ರೆಸ್ಸಿಗರು ರಾಜಕಾರಣ ಮಾಡಲು ಯೋಗ್ಯರಲ್ಲ
ಶಿವಮೊಗ್ಗ : ಇಷ್ಟು ಕೀಳುಮಟ್ಟದ ರಾಜಕಾರಣಕ್ಕೆ ಕಾಂಗ್ರೆಸ್ ಇಳಿಯುತ್ತದೆ ಎಂದು ಅಂದುಕೊಂಡಿರಲಿಲ್ಲ. ಒಬ್ಬ ಸಿಎಂ ಬಗ್ಗೆ ಪೆಸಿಎಂ ಎಂಬ ಅಭಿಯಾನ ಮಾಡುವ ಮೂಲಕ ನೀಚ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ನಡೆಸುತ್ತಿರುವ ಪೇ ಸಿಎಂ ಕೀಳುಮಟ್ಟದ ಅಭಿಯಾನ. ಯಾವುದೇ ಪಕ್ಷದ ಸಿಎಂ ಇರಲಿ, ಕೀಳುಮಟ್ಟಕ್ಕೆ ಇಳಿಯಬಾರದು.

ಕಾಂಗ್ರೆಸ್ ಮುಖಂಡರೇ ಇದರ ವಿರುದ್ಧ ಧ್ವನಿ ಎತ್ತಬೇಕಿತ್ತು. ಪೇ ಸಿಎಂ ಪೋಸ್ಟರ್ ಅಂಟಿಸಿದವರಿಗಿಂತಲೂ ಕಾಂಗ್ರೆಸ್ ಮುಖಂಡರು ಕೀಳು ಮಟ್ಟದವರು ಎಂದು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ಸಿಗರು ರಾಜಕರಾಣ ಮಾಡಲು ಯೋಗ್ಯರಲ್ಲ. ಪೇ ಸಿಎಂ ಪೋಸ್ಟರ್ ಹಂಚುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ನಾಯಕರು ಹೇಳಬೇಕಿತ್ತು.
ಆದ್ರೆ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಪೇಸಿಎಂ ಪೋಸ್ಟರ್ ಹಂಚುವ ಮೂಲಕ ಯುವ ಕಾಂಗ್ರೆಸ್ ಗಿಂತಲೂ ಕೀಳುಮಟ್ಟಕ್ಕೆ ಇಳಿಯುವ ಮೂಲಕ ಮುಖ್ಯಮಂತ್ರಿ ಪದವಿಗೆ ಕಾಂಗ್ರೆಸಿಗರು ಅಪಮಾನ ಮಾಡುತ್ತಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.








