ಎಲ್ಲಾ ಕುರುಬರಿಗೆ ಎಸ್ ಟಿ ಮೀಸಲಾತಿ ಸಿಗಲೇಬೇಕು : ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ರಾಜ್ಯದಲ್ಲಿ ಕುರುಬರಿಗೆ ಎಸ್ ಟಿ ಮೀಸಲಾತಿ ಸಿಗಬೇಕು. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕುರುಬರಿಗೆ ಎಸ್ ಟಿ ಮೀಸಲಾತಿ ಇದೆ. ಇದು ರಾಜ್ಯದ ಎಲ್ಲ ಜಿಲ್ಲೆಯ ಕುರುಬರಿಗೆ ಸಿಗಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕುರುಬ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಕುರುಬರು ಒಟ್ಟಿಗೆ ಸೇರಿದ್ದು, ಇದೇ ಮೊದಲು.
ಫೆಬ್ರವರಿ ಏಳು ರಾಜ್ಯದ ಕುರುಬರ ಪಾಲಿಗೆ ಐತಿಹಾಸಿಕ ದಿನ. ನಿರಂಜನಾನಂದ ಪುರ ಶ್ರೀಗಳು, ಈಶ್ವರಾನಂದಪುರಿ ಶ್ರೀಗಳ ಪಾದಯಾತ್ರೆ ಅಭೂತಪೂರ್ವವಾಗಿತ್ತು ಎಂದು ನಿನ್ನೆಯ ಕಾರ್ಯಕ್ರಮದ ಬಗ್ಗೆ ಹೇಳಿದರು.
ರಾಜ್ಯದಲ್ಲಿ ಕುರುಬರಿಗೆ ಎಸ್ ಟಿ ಮೀಸಲಾತಿ ಸಿಗಬೇಕು ಎಂದು ಒತ್ತಾಯಿಸಿದ ಈಶ್ವರಪ್ಪ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕುರುಬರಿಗೆ ಎಸ್ ಟಿ ಮೀಸಲಾತಿ ಇದೆ. ಇದು ರಾಜ್ಯದ ಎಲ್ಲಾ ಕುರುಬರಿಗೆ ಸಿಗಬೇಕು.
ಈ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಸಮಾವೇಶಕ್ಕೆ ಪ್ರತಿಯೊಬ್ಬರೂ ತಮ್ಮ ಖರ್ಚಿನಲ್ಲಿ ಬಂದಿದ್ದಾರೆ.
ಊಟದ ವ್ಯವಸ್ಥೆಯನ್ನು ದಾನಿಗಳ ನೆರವಿನಿಂದ ಮಾಡಿದ್ದೇವೆ. ಸಮಾವೇಶದ ಯಶಸ್ವಿಗೆ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಇನ್ನು ಸಮಾರಂಭಕ್ಕೆ ಸಿದ್ದರಾಮಯ್ಯ ಗೈರಿನ ವಿಚಾರವಾಗಿ ಮಾತನಾಡಿ, ನಮ್ಮ ಸಮುದಾಯದ ಶ್ರೀಗಳೇ ಸಿದ್ದರಾಮಯ್ಯ ಅವರನ್ನೇ ಖುದ್ದಾಗಿ ಸಮಾವೇಶಕ್ಕೆ ಆಹ್ವಾನಿಸಿದ್ದರು.
ನಾನು ಕೂಡ ಕರೆ ಮಾಡಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದೆ. ಆದಾಗ್ಯೂ ಅವರು ಬಂದಿಲ್ಲ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೊದಲು ನನ್ನ ಆಹ್ವಾನಿಸಿಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ, ಬಳಿಕ ಹೋರಾಟದ ಹಿಂದೆ ಆರ್ ಎಸ್ ಎಸ್ ಇದೆ ಹಾಗಾಗಿ ನಾನು ಹೋಗುವುದಿಲ್ಲ ಎಂದಿದ್ದರು. ಸಿದ್ದರಾಮಯ್ಯ ಎಷ್ಟು ಸುಳ್ಳು ಹೇಳ್ತಾರೆ ಅನ್ನೋದಕ್ಕೆ ಇದೇ ನಿದರ್ಶನ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel