K. S. Eshwarappa – ಸಿದ್ದರಾಮಯ್ಯ ಸಿಎಂ ಆಗಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಸಂದರ್ಭದಲ್ಲಿ ಬಂದು ಸುಮ್ಮನೆ ಕೈ ಬೀಸಿದ್ರೆ ಸಾಕು, ರಾಹುಲ್ ಗಾಂಧಿ ಎಲ್ಲಿ ಅಂತಾ ಹುಡುಕಬೇಕಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಪ್ರಧಾನಿ ಚುನಾವಣಾ ಸಂದರ್ಭದಲ್ಲಿ ಎಲ್ಲಾ ಕಡೆ ಬರುತ್ತಾರೆ.
![K. S. Eshwarappa - Siddaramaiah will not be CM](http://saakshatv.com/wp-content/uploads/2022/10/siddaramaiah-1.jpg)
ಆವಾಗ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಧೂಳಿಪಟ್ಟವಾಗುತ್ತಾರೆ ಎಂದು ಹೇಳಿದರು.
ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ “ಈಶ್ವರಪ್ಪ ಅವರನ್ನ ಬಿಜೆಪಿ ಸಿಎಂ ಮಾಡಲಿ” ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯನವರಿಗೆ ನನ್ನ ಮೇಲೆ ನಕಲಿ ಪ್ರೇಮಬೇಡ.
ಏನು ಮಾಡಬೇಕು ಅಂತಾ ನಮ್ಮ ಪಕ್ಷದವರಿಗೆ ಗೊತ್ತಿದೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಗಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತಾ ಭವಿಷ್ಯ ನುಡಿದರು.