ಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಪ್ರಕರಣ ದಾಖಲಾಗಿದೆ.
ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಪ್ರಕರಣ ಈಶ್ವರಪ್ಪ ವಿರುದ್ಧ ತುಂಗಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಚುನಾವಣಾ ಅಧಿಕಾರಿ ದೂರು ದಾಖಲಿಸಿದ್ದಾರೆ.