ಕಲಬುರಗಿ : ತಲ್ವಾರ್ ನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ kalaburagi
ಕಲಬುರಗಿ : ತಲ್ವಾರ್ ನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ.
ಭೀಮರಾಯ (22) ಕೊಲೆಯಾದ ಯುವಕನಾಗಿದ್ದಾನೆ. ಅದೇ ಗ್ರಾಮದ 20 ವರ್ಷದ ಸಿದ್ದಪ್ಪ ಎಂಬ ಯುವಕ ಕೊಲೆ ಆರೋಪಿಯಾಗಿದ್ದಾನೆ.
ಇಂದು ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ.
ಭೀಮರಾಯ ಮನೆಯಲ್ಲಿ ಮಲಗಿದ್ದಾಗ ತಲ್ವಾರನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.