ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜುಲೈ 1ರವರೆಗೂ ಕನಕಪುರ ಸ್ವಯಂಪ್ರೇರಿತ ಲಾಕ್ ಡೌನ್

admin by admin
June 22, 2020
in Newsbeat, Samagra karnataka, ರಾಜ್ಯ
DK Shivakumar Drug Mafia
Share on FacebookShare on TwitterShare on WhatsappShare on Telegram

ಕನಕಪುರ : ಕೊರೊನಾ ಸೋಂಕು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭೆ ಕ್ಷೇತ್ರದ ನಾಗರೀಕರು ಜುಲೈ 1 ರವರೆಗೆ ಸ್ವಯಂ ಪ್ರೇರಿತ ಲಾಕ್ ಡೌನ್ ಗೆ ಸ್ಥಳೀಯ ಶಾಸಕರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ನಡೆದ ತುರ್ತು ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ.

ಕನಕಪುರ ನಗರಸಭೆ ಕಚೇರಿಯ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ರಾಮನಗರ ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಅನೂಪ್ ಶೆಟ್ಟಿ, ಕನಕಪುರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಭಾಗವಹಿಸಿದ್ದರು.

ಕ್ಷೇತ್ರದಲ್ಲಿ ದಿನೇ ದಿನೇ ಕಾಳ್ಗಿಚ್ಚಿನಂತೆ ಹಬ್ಬುತ್ತಿರುವ ಕೊರೊನಾ ನಿಯಂತ್ರಣ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ಈ ಸಭೆ ಕರೆಯಲಾಗಿತ್ತು. ನಾನಾ ರಾಜಕೀಯ ಪಕ್ಷಗಳ ಮುಖಂಡರು, ಇಲಾಖೆಗಳ ಅಧಿಕಾರಿಗಳು, ಸಾಮಾಜಿಕ ಮತ್ತು ನಾಗರೀಕ ಸಂಘಟನೆಗಳ ಪ್ರತಿನಿಧಿಗಳು, ಉದ್ಯಮಿಗಳು, ವರ್ತಕರು ಮತ್ತಿತರರು ಭಾಗವಹಿಸಿದ್ದ ಈ ಸಭೆಯಲ್ಲಿ ಜುಲೈ 1 ರವರೆಗೆ ಕನಕಪುರ ಸ್ವಯಂ ಪ್ರೇರಿತ ಲಾಕ್ ಡೌನ್ (self qurantine) ಬಗ್ಗೆ ಏಕಮತ ನಿರ್ಧಾರಕ್ಕೆ ಬರಲಾಯಿತು.

ಇದು ಮಕ್ಕಳು, ವೃದ್ಧರು ಸೇರಿದಂತೆ ಸ್ಥಳೀಯ ನಾಗರಿಕರ ಹಿತದೃಷ್ಟಿ, ಆರೋಗ್ಯ ರಕ್ಷಣೆ, ಕನಕಪುರ ಕ್ಷೇತ್ರದ ಗೌರವ ಕಾಪಾಡಿಕೊಳ್ಳಲು ಅನಿವಾರ್ಯ. ಜುಲೈ 1 ರ ನಂತರ ಪರಿಸ್ಥಿತಿಯನ್ನು ಅವಲೋಕಿಸಿ, ಇದೇ ರೀತಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳೋಣ. ರಾಜ್ಯ ಸರಕಾರದ ಆದೇಶಕ್ಕೂ ಇದಕ್ಕೂ ಸಂಬಂಧವಿಲ್ಲ. ನಾವೆಲ್ಲರೂ ಒಟ್ಟಿಗೆ ಸ್ವಯಿಚ್ಛೆಯಿಂದ ತೆಗೆದುಕೊಂಡಿರುವ ನಿರ್ಣಯ ಇದು ಎಂಬ ನಿಲುವಿಗೆ ಸಭೆಯಲ್ಲಿ ಬರಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದವರ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ , ಈ ಲೌಕ್ ಡೌನ್ ಗೂ ರಾಜ್ಯ ಸರಕಾರದ ಆದೇಶವಲ್ಲ. ಕನಕಪುರ ಜನತೆ ಮುನ್ನೆಚ್ಚರಿಕೆ ಕ್ರಮವಾಗಿ ತೆಗೆದುಕೊಂಡಿರುವ ಪ್ರಜ್ಞಾಪೂರ್ವಕ ಸ್ವಂತ ನಿರ್ಣಯ. ಜೀವವಿದ್ದರೆ ಜೀವನ ಎಂಬ ನಂಬುಗೆಯ ಆಧಾರದಲ್ಲಿ ಕೈಗೊಂಡಿರುವ ಮಾದರಿ ನಿರ್ಧಾರ. ಅದಕ್ಕಾಗಿ ಅವರನ್ನು ನಾನು ಅಭಿನಂದಿಸುತ್ತೇನೆ.

ಬೆಳಗ್ಗೆ 7 ರಿಂದ 11 ಗಂಟೆವರೆಗೆ ಮಾತ್ರ ದಿನಸಿ ವಸ್ತುಗಳು, ಹಣ್ಣು, ತರಕಾರಿ, ಸೊಪ್ಪು, ಮಾಂಸ ಮತ್ತಿತರ ದಿನಬಳಕೆ ಆಹಾರ ವಸ್ತುಗಳ ಮಾರಾಟಕ್ಕೆ ವರ್ತಕರು ಸಮ್ಮತಿಸಿದ್ದಾರೆ. ಕ್ಲಿನಿಕ್ ಗಳು, ಔಷದ ಅಂಗಡಿಗಳ ಸಮಯಾವಧಿ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು, ಡಿಸಿ, ಎಸ್ಪಿ, ಆಸ್ಪತ್ರೆ ಪ್ರತಿನಿಧಿಗಳು ನಿರ್ಣಯ ಮಾಡುತ್ತಾರೆ. ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಅಸೋಸಿಯೇಷನ್ ನವರು ಮದ್ಯದಂಗಡಿಗಳ ಸಮಯ ನಿಗದಿ ಮಾಡುತ್ತಾರೆ. ಆದರೆ ಎಲ್ಲ ಬಗೆಯ ವರ್ತಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ವ್ಯಾಪಾರ ಸ್ಥಳದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಇದರ ಬಗ್ಗೆ ಪೊಲೀಸ್ ಇಲಾಖೆ ಸಿಬ್ಬಂದಿ ನಿಗಾ ವಹಿಸುತ್ತದೆ.

ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ರಾಮನಗರ ಜಿಲ್ಲೆಯ ಆಸ್ಪತ್ರೆಗಳು ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ಅವರ ಊಟೋಪಾಚಾರಗಳಿಗೆ ನಿತ್ಯ ಬರೀ ತಲಾ 60 ರುಪಾಯಿ ಮಾತ್ರ ಸರಕಾರ ನೀಡುತ್ತಿದೆ. ಇದರಿಂದ ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂಬ ದೂರು ಬಂದಿದೆ. ಹೀಗಾಗಿ ಡಿ.ಕೆ.ಎಸ್. ಚಾರಿಟಬಲ್ ಟ್ರಸ್ಟ್ ನಿಂದ ಹೆಚ್ಚುವರಿಯಾಗಿ ತಲಾ 100 ರುಪಾಯಿ ನೀಡಲಾಗುವುದು. ಇದರಿಂದ ಒಟ್ಟಾರೆ ತಲಾ 160 ರುಪಾಯಿ ಸೋಂಕಿತರು, ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವವರಿಗೆ ಸಿಕ್ಕಂತಾಗುತ್ತದೆ. ಜತೆಗೆ ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವವರು ಮನೆಯಿಂದ ಹಾಸಿಗೆ, ಹೊದಿಕೆ, ಬಟ್ಟೆ ಮತ್ತಿತರ ವಸ್ತುಗಳನ್ನು ತರಿಸಿಕೊಳ್ಳಬಹುದು. ಇಲ್ಲದಿದ್ದರೆ ನಾನೇ ಟ್ರಸ್ಠ್ ಮೂಲಕ ಅದನ್ನು ಒದಗಿಸಲು ಸಿದ್ಧನಿದ್ದೇನೆ. ರೇಷ್ಮೆ ಮಾರುಕಟ್ಟೆ ತೆರೆದಿರುತ್ತಿದೆ. ಅದಕ್ಕೂ ನಿಗದಿತ ಸಮಯ ಇರುತ್ತದೆ.

ಇನ್ನು ಎಸ್ಸೆಸ್ಸೆಲ್ಸಿ, ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವಿಚಾರದಲ್ಲಿ ರಾಜ್ಯ ಸರಕಾರದ ನಿರ್ಧಾರವೇ ಅಂತಿಮ. ಇದರಲ್ಲಿ ನಾವ್ಯಾರೂ ತಲೆ ಹಾಕುವುದಿಲ್ಲ. ಆದರೆ ಈ ವಿದ್ಯಾರ್ಥಿಗಳಿಗೆ 1 ಲಕ್ಷ ಮಾಸ್ಕ್ ಗಳನ್ನು ವಿತರಿಸಲಾಗುವುದು. ಈಗಾಗಲೇ ಅದನ್ನು ಸಿದ್ಧಪಡಿಸಿ ಇಟ್ಟುಕೊಳ್ಳಲಾಗಿದೆ. ಈ ಸ್ವಯಂ ಪ್ರೇರಿತ ಲಾಕ್ ಡೌನ್ ಸಂದರ್ಭದಲ್ಲಿ ಅನಗತ್ಯ ಓಡಾಟ ವಾಹನ ಸಙಚಾರಕ್ಕೆ ಕಡಿವಾಣ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಯಾರೂ ಯಾರ ಮೇಲೂ ದಬ್ಬಾಳಿಕೆ ಮಾಡಬಾರದು.

ಭಾನುವಾರ ರಜಾದಿನವೂ ಸಭೆಗೆ ಹಾಜರಾಗಿರುವ ಅಧಿಕಾರಿಗಳಿಗೆ ಅಭಿನಂದನೆಗಳು. ಕ್ಷೇತ್ರದ ನಾಗರಿಕರ ಹಿತರಕ್ಷಣೆಗೆ ನಾವು ಬದ್ಧ. ನಾಗರಿಕರ ಆಶೀರ್ವಾದ, ಸಹಕಾರ ನಮ್ಮೆಲ್ಲರಿಗೂ ಹೀಗೆಯೇ ಮುಂದುವರಿಯಲಿ ಎಂದರು

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026
Tags: seal down
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram