ಜನವಸತಿ ಪ್ರದೇಶದಲ್ಲಿರುವ ಜ್ಯುವೆಲರಿ ಶಾಪ್ ಗೆ ಖದೀಮರು ಕನ್ನ ಹಾಕಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಗ್ಯಾಸ್ ಕಟರ್ ಬಳಸಿ ಒಳ ನುಗ್ಗಿದ ಖದೀಮರು, ಸುಮಾರು 30 ಲಕ್ಷ ರೂ. ಮೌಲ್ಯದ ಬೆಳಲೆ ಬಾಳುವ ಚಿನ್ನ ಹಾಗೂ 50 ಕೆಜಿಯಷ್ಟು ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ.
ಮಾತಾಜಿ ಜ್ಯುವೆಲ್ಲರ್ಸ್ ಆಂಡ್ ಬ್ಯಾಂಕರ್ಸ್ ಮಳಿಗೆಯ ಬಾಗಿಲನ್ನು ಗ್ಯಾಸ್ ಕಟರ್ ನಿಂದ ಕಟ್ ಮಾಡಿ, ಒಳ ನುಗ್ಗಿ ದೋಚಿ ಪರಾರಿಯಾಗಿದ್ದಾರೆ. 200 ಗ್ರಾಂ ಚಿನ್ನ ಹಾಗೂ 50 ಕೆಜಿಯಷ್ಟು ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ. ಅಲ್ಲದೇ, ಪೊಲೀಸರಿಗೆ ಸಿಗಬಾರದು ಎಂಬ ಕಾರಣಕ್ಕೆ ಸಿಸಿಟಿವಿ ಕ್ಯಾಮಾರಾದ ಡಿವಿಆರ್ ಸಮೇತವಾಗಿ ಎಸ್ಕೇಪ್ ಆಗಿದ್ದಾರೆ.
ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಖದೀಮರಿಗಾಗಿ ಬಲೆ ಬೀಸಿದ್ದಾರೆ.