ADVERTISEMENT
Thursday, April 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Kannada Film : ಟ್ರೇಲರ್ ನೊಂದಿಗೆ ಬಂದ ‘ದೂರದರ್ಶನ’ ಚಿತ್ರತಂಡ 

Namratha Rao by Namratha Rao
February 19, 2023
in Cinema, News, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Kannada Film : ಟ್ರೇಲರ್ ನೊಂದಿಗೆ ಬಂದ ‘ದೂರದರ್ಶನ’ ಚಿತ್ರತಂಡ

ಸುಕೇಶ್ ಶೆಟ್ಟಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ದೂರದರ್ಶನ’ ಸಿನಿಮಾ ಸ್ಯಾಂಡಲ್ ವುಡ್ ಅಂಗಳದಲ್ಲಿ ನಿರೀಕ್ಷೆ ಹುಟ್ಟಿಸಿದೆ. ಮಾರ್ಚ್ 3ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದಲ್ಲಿ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಹಾಗೂ ಅಯಾನ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಡ್ರಾಮಾ ಹಾಗೂ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

Related posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

April 9, 2026
ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

April 9, 2026

 

ನಾಯಕ ಪೃಥ್ವಿ ಅಂಬರ್ ಮಾತನಾಡಿ ಈ ಸಿನಿಮಾ ಎಲ್ಲರಿಗೂ ತುಂಬಾ ಹತ್ತಿರ ಆಗುತ್ತೆ. ಒಂದು ಕಾದಂಬರಿ ಓದಿದ ಅನುಭವವನ್ನು ಈ ಸಿನಿಮಾ ಎಲ್ಲರಿಗೂ ನೀಡುತ್ತೆ. ನಾನು ಮನು ಎಂಬ ಪಾತ್ರ ಮಾಡಿದ್ದೇನೆ. ಬಾಲ್ಯದಲ್ಲಿ ಮಾಡಿದ ತರಲೆ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ತುಂಬಾ ಚೆನ್ನಾಗಿ ಈ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ದೂರದರ್ಶನ ಒಂದು ಒಳ್ಳೆಯ ಕಟೆಂಟ್ ಸಿನಿಮಾ. ಲವ್ ಸ್ಟೋರಿ, ಕಾಮಿಡಿ, ಎಮೋಷನ್ಸ್ ಎಲ್ಲವೂ ಈ ಚಿತ್ರದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ನಾಯಕಿ ಅಯಾನ ಮಾತನಾಡಿ ಈ ಸಿನಿಮಾ ನಮ್ಮ ನಿರ್ದೇಶಕರ ಡ್ರೀಮ್ ಪ್ರಾಜೆಕ್ಟ್. ಈ ಚಿತ್ರದಲ್ಲಿ ನನಗೆ ಅವಕಾಶ ಕೊಟ್ಟಿದಕ್ಕೆ ತುಂಬಾ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ಮೈತ್ರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿಂಪಲ್ ಹುಡುಗಿ ಪಾತ್ರ. ಲವ್ ಸ್ಟೋರಿ ಕೂಡ ಇದೆ. ಎಲ್ಲಾ ಕಲಾವಿದರೊಂದಿಗೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ ಎಂದು ಸಂತಸ ಹಂಚಿಕೊಂಡ್ರು.

ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ ಈ ಸಿನಿಮಾ ಈ ಮಟ್ಟಿಗೆ ಬಂದು ನಿಂತಿದೆ ಅಂದ್ರೆ ಅದಕ್ಕೆ ಕಾರಣ ನಮ್ಮ ನಿರ್ಮಾಪಕರು. ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಸಿನಿಮಾ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರ ಒಂದಷ್ಟು ವಿಷಯಗಳಿಗೆ ಸ್ಪೆಷಲ್ ಎನಿಸಿಕೊಳ್ಳುತ್ತೆ. ರೆಗ್ಯೂಲರ್ ಸ್ಟೈಲ್ ಬಿಟ್ಟು ತುಂಬಾ ಆಪ್ತವಾಗೋ ಹಾಗೆ ಸಿನಿಮಾವನ್ನು ನರೇಟ್ ಮಾಡಲಾಗಿದೆ. ಎರಡು ಕಾಲು ಗಂಟೆ ಒಂದು ಊರೊಳಗೆ ಹೋಗಿ ಎಂಜಾಯ್ ಮಾಡಿದ ಅನುಭವವನ್ನು ಈ ಸಿನಿಮಾ ಪ್ರತಿಯೊಬ್ಬರಿಗೂ ನೀಡಲಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ನಿರ್ಮಾಪಕ ರಾಜೇಶ್ ಭಟ್ ಮಾತನಾಡಿ ಈ ಸಿನಿಮಾ ಕೇವಲ ನನ್ನೊಬ್ಬನಿಂದ ಆಗಿಲ್ಲ. ತಾಂತ್ರಿಕ ವರ್ಗ, ಕಲಾವಿದರ ಸಹಕಾರ ಇವರೆಲ್ಲರಿಂದ ಈ ಸಿನಿಮಾ ಆಗಿದೆ. ನಿರ್ದೇಶಕ ಸುಕೇಶ್ ಶೆಟ್ಟಿ ಜೊತೆ ಕೆಲಸ ಮಾಡಿದ್ದು ತುಂಬಾ ಹೆಮ್ಮೆ ಎನಿಸುತ್ತೆ. ಎಲ್ಲರ ಸಪೋರ್ಟ್ ಸಿನಿಮಾ ಮೇಲೆ ಇರಲಿ ಎಂದು ತಿಳಿಸಿದ್ರು.

ಉಗ್ರಂ ಮಂಜು ಮಾತನಾಡಿ ಇಡೀ ತಂಡ ಶ್ರಮ ಹಾಗೂ ಪ್ರೀತಿಯಿಂದ ಮಾಡಿರುವ ಸಿನಿಮಾ ‘ದೂರದರ್ಶನ’. ಚಿತ್ರದಲ್ಲಿ ಕಿಟ್ಟಿ ಎಂಬ ಪಾತ್ರ ಮಾಡಿದ್ದೇನೆ. 80.90ರ ದಶಕದಲ್ಲಿ ನೋಡುವ ಸ್ನೇಹ, ದ್ವೇಷ ಜೊತೆಗೆ ಕುಟುಂಬದ ಕನಸನ್ನು ನೆರವೇರಿಸುವ ಹುಡುಗನ ಪಾತ್ರ. ಎಲ್ಲಾ ಕಲಾವಿದರು, ತಾಂತ್ರಿಕ ವರ್ಗದ ಸಹಕಾರದಿಂದ ಈ ಚಿತ್ರ ಈ ಮಟ್ಟಿಗೆ ಬಂದಿದೆ. ನಿರ್ದೇಶಕ ಸುಕೇಶ್ ಶೆಟ್ಟಿ ನನಗೆ ಕಥೆ ಹೇಳುವಾಗ ಏನು ಪ್ರಾಮಿಸ್ ಮಾಡಿದ್ದರೋ ಹಾಗೆಯೇ ಸಿನಿಮಾ ಮೂಡಿ ಬಂದಿದೆ. ಅವರ ಎಫರ್ಟ್ ನೋಡಿ ಹೆಮ್ಮೆ ಎನಿಸುತ್ತೆ. ಮಾರ್ಚ್ 3ರಂದು ಎಲ್ಲರೂ ಸಿನಿಮಾ ನೋಡಿ ನಮ್ಮ ತಂಡವನ್ನು ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

 

ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ರಾಜೇಶ್ ಭಟ್ ಚಿತ್ರವನ್ನು ನಿರ್ಮಾಣ ಮಾಡಿದ್ದು, ಉಗ್ರಂ ಮಂಜು ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ. ಉಗ್ರಂ ಮಂಜು, ಸುಂದರ್, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಚಿತ್ರದಲ್ಲಿದೆ. ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿ ಜಿ ಸಂಭಾಷಣೆ, ವಾಸುಕಿ ವೈಭವ ಸಂಗೀತ ಚಿತ್ರಕ್ಕಿದೆ.

 

Kannada Film , dooradarshan trailer release

Tags: dooradarshankannada film
ShareTweetSendShare
Join us on:

Related Posts

ವಿಷಕಾರಿ ಹಾವಿಗಿಂತ ಹೆಚ್ಚು ವಿಷ  ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಅಪ್ಪ-ಮಗನ ತಲೆಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

by Shwetha
April 9, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚೋದನಾಕಾರಿ ಹೇಳಿಕೆಗಳ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿ, ನಾಲಿಗೆಯನ್ನು...

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

by Shwetha
April 9, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಾಸ್ಟರ್ ಸ್ಟ್ರಾಟಜಿಸ್ಟ್ ಎಂದೇ ಗುರುತಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ನೇರ...

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

ಲಕ್ಷ್ಮಣ ಸವದಿಗೆ ಬಿಜೆಪಿ ಬಾಗಿಲು ಶಾಶ್ವತ ಬಂದ್: ಯತ್ನಾಳರನ್ನು ವಾಪಸ್ ಕರೆತರುವ ಜವಾಬ್ದಾರಿ ನಂದು – ರಮೇಶ್ ಜಾರಕಿಹೊಳಿ

by Shwetha
April 9, 2026
0

ಅಥಣಿ: ಲಕ್ಷ್ಮಣ ಸವದಿ ಬಿಜೆಪಿಗೆ ಮರಳಿ ಬರುವ ಪ್ರಶ್ನೆಯೇ ಇಲ್ಲ, ಒಂದು ವೇಳೆ ಅವರು ಪ್ರಯತ್ನಿಸಿದರೂ ನಾವು ಸೇರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ್...

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

ರಾಜ್ಯದಲ್ಲಿ ಮಂಗನ ಕಾಯಿಲೆಗೆ ವೃದ್ಧ ಬಲಿ

by Shwetha
April 9, 2026
0

ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆಯ ಅಬ್ಬರ ಶುರುವಾಗಿದೆ. ಈ ಮಾರಕ ಕಾಯಿಲೆಗೆ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ...

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

by Shwetha
April 9, 2026
0

ಇರಾನ್–ಅಮೆರಿಕಾ ಸೀಸ್‌ಫೈರ್ ವಿಚಾರದಲ್ಲಿ ನಿಜವಾದ ಹಿನ್ನಲೆ ಶಕ್ತಿ ಚೀನಾ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರಂಭದಲ್ಲಿ ಮಾತುಕತೆಗೆ ಸಮ್ಮತಿಸದ ಇರಾನ್ ಅನ್ನು ಬೀಜಿಂಗ್ ಮನವೊಲಿಸಿದೆ ಎನ್ನಲಾಗುತ್ತಿದೆ. ಚೀನಾ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram