Kannada Rajyotsava Awards 2020 ಬೆಂಗಳೂರು : ರಾಜ್ಯ ಸರ್ಕಾರ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ – 2020 ಪಟ್ಟಿಯನ್ನು ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಸಕ್ತ ವರ್ಷ ಕರ್ನಾಟಕವು 65ನೇ ರಾಜ್ಯೋತ್ಸವ ಆಚರಿಸುತ್ತಿದ್ದು, ಈ ಮಹತ್ವದ ಸಂದರ್ಭದ ಸಲುವಾಗಿ 65 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಸಚಿವ ಸಿ.ಟಿ ರವಿ ಮಾಹಿತಿ ನೀಡಿ ಪುರಸ್ಕøತರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಬಾರಿಯಂತೆ ಈ ಬಾರಿ ರಾಜ್ಯೋತ್ಸವ ದಿನ ನವೆಂಬರ್ 1 ರಂದು ಪ್ರಶಸ್ತಿ ಪ್ರದಾನ ಮಾಡುತ್ತಿಲ್ಲ.
ನವೆಂಬರ್ 7ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಈ ಬಾರಿ ಬಿಜೆಪಿ ಮತ್ತು ಆರ್ ಎಸ್ ಎಸ್ ಪೋಷಿತವಾದ ಯುವ ಬ್ರಿಗೇಡ್ ಕೂಡ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಸಂಘ ಸಂಸ್ಥೆ ಕ್ಷೇತ್ರದಲ್ಲಿ ಸಾಧನೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನಿಯಮ ಮೀರಿ ಪ್ರಶಸ್ತಿ ಕೊಟ್ಟಿಲ್ಲ. ಆರ್ ಎಸ್ ಎಸ್ ಪೋಷಿತ ಆಗಿರುವುದಕ್ಕೆ ಪ್ರಶಸ್ತಿ ಕೊಡಬಾರದು ಎಂದೇನೂ ಇಲ್ಲ. ಸಂಘದ ಸೇವೆಯನ್ನು ಪರಿಗಣಿಸಿ ಕೊಟ್ಟಿದ್ದೇವೆ. ಈ ವಿಚಾರವಾಗಿ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಕಾರು, ಬೈಕಲ್ಲಿ ಒಬ್ರೇ ಇದ್ರೂ ಮಾಸ್ಕ್ ಕಡ್ಡಾಯ; ಬಿಬಿಎಂಪಿ ಹೊಸ ರೂಲ್ಸ್ ಖಜಾನೆ ತುಂಬಿಸುವ ಯತ್ನವಾ..?
ವಿಶೇಷವೆಂದರೇ ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ರಾಮನ ದೇವಾಲಯ ನಿರ್ಮಾಣವಾಗಬೇಕು ಎಂದು ಸತತ ಮೂರು ವರ್ಷ ಕಾಲ ಅಲಹಾಬಾದ್ ಹೈಕೋರ್ಟ್?ನಲ್ಲಿ ವಾದ ಮಂಡಿಸಿದ್ದ ಹಿರಿಯ ನ್ಯಾಯವಾದಿ ಕೆ.ಎನ್. ಭಟ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಅಂದಹಾಗೆ ರಾಜ್ಯೋತ್ಸವ ಪ್ರಶಸ್ತಿಗೆ 130 ಜನ ಸಾಧಕರು ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 26 ವಿವಿಧ ಕ್ಷೇತ್ರಗಳಲ್ಲಿ ಅನೇಕ ಸಾಧನೆಗಳನ್ನು ಮಾಡಿದ 65 ಜನಸಾಧಕರಿಗೆ ಮಾತ್ರ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಪುರಸ್ಕೃತರ ಪಟ್ಟಿ ಇಲ್ಲಿದೆ.
ಸಾಹಿತ್ಯ ಕ್ಷೇತ್ರ
1. ಪ್ರೋ ಸಿಪಿ ಸಿದ್ಧಾಶ್ರಮ, ಧಾರವಾಡ
2. ವಿ. ಮುನಿ ವೆಂಕಟಪ್ಪ, ಕೋಲಾರ
3. ರಾಮಣ್ಣ ಬ್ಯಾಟಿ ( ವಿಶೇಷ ಚೇತನ), ಗದಗ
4. ವಲೇರಿಯನ್ ಡಿಸೋಜ (ವಲ್ಲಿವಗ್ಗ), ದಕ್ಷಿಣ ಕನ್ನಡ
5. ಡಿ ಎನ್ ಅಕ್ಕಿ, ಯಾದಗಿರಿ.
ಸಂಗೀತ ಕ್ಷೇತ್ರ
6. ಹಂಬಯ್ಯ ನೂಲಿ, ರಾಯಚೂರು
7. ಅನಂತ ತೇರದಾಳ, ಬೆಳಗಾವಿ
8. ಬಿ.ವಿ ಶ್ರೀನಿವಾಸ್ , ಬೆಂಗಳೂರು ನಗರ
9. ಗಿರಿಜಾ ನಾರಾಯಣ , ಬೆಂಗಳೂರು ನಗರ
10. ಕೆ ಲಿಂಗಪ್ಪ ಶೇರಿಗಾರ ಕಟೀಲು, ದಕ್ಷಿಣ ಕನ್ನಡ
ನ್ಯಾಯಾಂಗ
11. ಕೆ.ಎನ್. ಭಟ್, ಬೆಂಗಳೂರು
12. ಎಂಕೆ ವಿಜಯಕುಮಾರ್, ಉಡುಪಿ
ಮಾಧ್ಯಮ
12. ಸಿ. ಮಹೇಶ್ವರನ್, ಮೈಸೂರು
14. ಟಿ. ವೆಂಕಟೇಶ್ (ಈ ಸಂಜೆ), ಬೆಂಗಳೂರು
ಯೋಗ
15. ಡಾ. ಎ.ಎಸ್. ಚಂದ್ರಶೇಖರ್, ಮೈಸೂರು
ಶಿಕ್ಷಣ ಕ್ಷೇತ್ರ
16. ಎಂ.ಎನ್. ಷಡಕ್ಷರಿ, ಚಿಕ್ಕಮಗಳೂರು
17. ಡಾ. ಆರ್ ರಾಮಕೃಷ್ಣ, ಚಾಮರಾಜನಗರ
18. ಡಾ. ಎಂಜಿ ಈಶ್ವರಪ್ಪ, ದಾವಣಗೆರೆ
19. ಡಾ. ಪುಟ್ಟಸಿದ್ದಯ್ಯ, ಮೈಸೂರು
20. ಅಶೋಕ್ ಶೆಟ್ಟರ್, ಬೆಳಗಾವಿ
21. ಡಿಎಸ್ ದಂಡಿನ್, ಗದಗ
ಹೊರನಾಡು ಕನ್ನಡಿಗರು
22. ಕುಸುಮೋದರದೇರಣ್ಣ ಶೆಟ್ಟಿ ಕೇಲ್ತಡ್ಕ, ದಕ್ಷಿಣ ಕನ್ನಡ
23. ವಿದ್ಯಾ ಸಿಂಹಾಚಾರ್ಯ ಮಾಹುಲಿ, ಮಹಾರಾಷ್ಟ್ರ ಮಾಲುಂಡ, ಮುಂಬೈ.
ಕ್ರೀಡೆ
24. ಎಚ್ಬಿ ನಂಜೇಗೌಡ, ತುಮಕೂರು
25. ಉಷಾರಾಣಿ, ಬೆಂಗಳೂರು ನಗರ
ಸಂಕೀರ್ಣ
26. ಡಾ.ಕೆವಿ ರಾಜು, ಕೋಲಾರ
27. ನಂ. ವೆಂಕೋಬರಾವ್, ಹಾಸನ
28. ಡಾ. ಕೆಎಸ್ ರಾಜಣ್ಣ (ವಿಕಲಚೇತನ), ಮಂಡ್ಯ
29. ವಿ. ಲಕ್ಷ್ಮೀನಾರಾಯಣ (ನಿರ್ಮಾಣ್) ಮಂಡ್ಯ
ಸಂಘ ಸಂಸ್ಥೆ
30. ಯೂಥ್ ಫಾರ್ ಸೇವಾ, ಬೆಂಗಳೂರು
31. ದೇವದಾಸಿ ಸ್ವಾವಲಂಬನ ಕೇಂದ್ರ, ಬಳ್ಳಾರಿ
32. ಬೆಟರ್ ಇಂಡಿಯಾ, ಬೆಂಗಳೂರು
33. ಯುವ ಬ್ರಿಗೇಡ್, ಬೆಂಗಳೂರು ಗ್ರಾಮಾಂತರ
34. ಧರ್ಮೋತ್ಥಾನ ಟ್ರಸ್ಟ್, ಧರ್ಮಸ್ಥಳ, ದಕ್ಷಿಣ ಕನ್ನಡ
ಸಮಾಜಸೇವೆ
35. ಎನ್ ಎಸ್ (ಕುಂದರಗಿ) ಹೆಗಡೆ, ಉತ್ತರ ಕನ್ನಡ
36. ಪ್ರೇಮಾ ಕೋಮಂಡರಾಮ ಶ್ರೇಷ್ಠಿ, ಚಿಕ್ಕಮಗಳೂರು
37. ಮಣೆಗಾರ್ ಮೀರಾನ್ ಸಾಹೇಬ್, ಉಡುಪಿ
38. ಮೋಹಿನಿ ಸಿದ್ದೇಗೌಡ, ಚಿಕ್ಕಮಗಳೂರು
ವೈದ್ಯಕೀಯ ಕ್ಷೇತ್ರ
39. ಡಾ. ಅಶೋಕ್ ಸೊನ್ನದ್, ಬಾಗಲಕೋಟೆ
40 ಡಾ. ಬಿಎಸ್ ಶ್ರೀನಾಥ್, ಶಿವಮೊಗ್ಗ
41. ಡಾ. ಎ. ನಾಗರತ್ನ, ಬಳ್ಳಾರಿ
42. ಡಾ. ವೆಂಕಟಪ್ಪ ರಾಮನಗರ
ಕೃಷಿ
43. ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್, ಬೀದರ್
44. ಎಸ್ವಿ ಸುಮಂಗಲಮ್ಮ ವೀರಭದ್ರಪ್ಪ, ಚಿತ್ರದುರ್ಗ
45. ಡಾ. ಸಿದ್ರಾಮಪ್ಪ ಬಸವಂತರಾವ್ ಪಾಟೀಲ್, ಕಲಬುರಗಿ
ಪರಿಸರ
46. ಅಮರ ನಾರಾಯಣ, ಚಿಕ್ಕಬಳ್ಳಾಪುರ
47. ಎನ್ಡಿ ಪಾಟೀಲ್, ವಿಜಯಪುರ
ವಿಜ್ಞಾನ/ತಂತ್ರಜ್ಞಾನ
48. ಪ್ರೋ. ಉಡುಪಿ ಶ್ರೀನಿವಾಸ, ಉಡುಪಿ
49. ಡಾ. ಚಿಂದಿ ವಾಸುದೇವಪ್ಪ, ಶಿವಮೊಗ್ಗ
ಸಹಕಾರ
50. ಡಾ. ಸಿಎನ್ ಮಂಜೇಗೌಡ, ಬೆಂಗಳೂರು
ಬಯಲಾಟ
51. ಕೆಂಪವ್ವ ಹರಿಜನ, ಬೆಳಗಾವಿ
52. ಚೆನ್ನಬಸಪ್ಪ ಬೆಂಡಿಗೇರಿ, ಹಾವೇರಿ
ಯಕ್ಷಗಾನ
53. ಬಂಗಾರ್ ಆಚಾರಿ, ಚಾಮರಾಜನಗರ
54. ಎಂಕೆ ರಮೇಶ್ ಆಚಾರ್ಯ, ಶಿವಮೊಗ್ಗ
ರಂಗಭೂಮಿ
55. ಅನಸೂಯಮ್ಮ, ಹಾಸನ
56. ಎಚ್. ಷಡಾಕ್ಷರಪ್ಪ, ದಾವಣಗೆರೆ
57. ತಿಪ್ಪೇಸ್ವಾಮಿ, ಚಿತ್ರದುರ್ಗ
ಚಲನಚಿತ್ರ
58. ಬಿಎಸ್ ಬಸವರಾಜ್, ತುಮಕೂರು
59. ಎ.ಟಿ. ರಘು, ಕೊಡಗು
ಚಿತ್ರಕಲೆ
60. ಎಂಜೆ ವಾಚೇದ್ ಮಠ, ಧಾರವಾಡ
ಜಾನಪದ
61. ಗುರುರಾಜ ಹೊಸಕೋಟೆ, ಬಾಗಲಕೋಟೆ
62. ಡಾ. ಹಂಪನಹಳ್ಳಿ ತಿಮ್ಮೇಗೌಡ, ಹಾಸನ
ಶಿಲ್ಪಕಲೆ
63. ಎನ್ಎಸ್ ಜನಾರ್ದನ ಮೂರ್ತಿ, ಮೈಸೂರು
ನೃತ್ಯ
64. ನಾಟ್ಯ ವಿದುಷಿ ಜ್ಯೋತಿ ಪಟ್ಟಾಭಿರಾಮ್
ಜಾನಪದ/ತೊಗಲು ಗೊಂಬೆಯಾಟ
65. ಕೇಶಪ್ಪ ಶಿಳ್ಳೆಕ್ಯಾತರ, ಕೊಪ್ಪಳ
ಇನ್ನು ಪ್ರಶಸ್ತಿ ಮೊತ್ತ 1 ಲಕ್ಷ ಮತ್ತು 25 ಗ್ರಾಂ ಚಿನ್ನದ ಪದಕ ಒಳಗೊಂಡಿರುತ್ತದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









