ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆರೂರು ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರ-2 ಸಿನಿಮಾ ತಂಡವು ಅರಣ್ಯ ನಿಯಮಾವಳಿಗಳನ್ನು ಉಲ್ಲಂಘಿಸಿ, ಬೆಂಕಿ ಹಚ್ಚಲಾಗಿದೆ ಮತ್ತು ಪಟಾಕಿ ಸಿಡಿಸಲಾಗಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ಅರಣ್ಯಾಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿ, ಚಿತ್ರತಂಡ ಚಿತ್ರೀಕರಣದ ವೇಳೆ ಯಾವುದೇ ರೀತಿಯ ಸ್ಫೋಟಕಗಳನ್ನು ಬಳಸಿದ್ದರೆ ಚಿತ್ರೀಕರಣವನ್ನು ಕೂಡಲೇ ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿರುತ್ತಾರೆ.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ
ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...








