ಗುಲಾಂ ನಬಿ ಆಜಾದ್ಗೆ ಪದ್ಮಭೂಷಣ – ಸ್ವ ಪಕ್ಷದ ವಿರುದ್ಧ ಕಪಿಲ್ ಸಿಬಲ್ ಟೀಕೆ
ನವದೆಹಲಿ: ಗುಲಾಂ ನಬಿ ಆಜಾದ್ ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣ ಪ್ರಶಸ್ತಿ ಘೋಷಣೆಯಾದ ನಂತರ ಕಪಿಲ್ ಸಿಬಲ್ ತಮ್ಮ ಸ್ವ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್ರ್ ನಲ್ಲಿ ಕಪಿಲ್ ಸಿಬಲ್, ಆಜಾದ್ ಅವರನ್ನು ಅಭಿನಂದಿಸಿದ್ದಾರೆ. ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಕೊಡುಗೆಗಳನ್ನು ರಾಷ್ಟ್ರವು ಗುರುತಿಸಿದಾಗ, ಅವರ ಸೇವೆಗಳು ಕಾಂಗ್ರೆಸ್ಗೆ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಆಗಸ್ಟ್ 2020 ರಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ 23 ನಾಯಕರಲ್ಲಿ ಸಿಬಲ್ ಮತ್ತು ಆಜಾದ್ ಕೂಡ ಸೇರಿದ್ದರು. ಆನಂತರ ಇವರು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳಲಿಲ್ಲ.
ಕಳೆದ ವರ್ಷ ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ಚುನಾವಣೆಗಳ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಆಜಾದ್ ಅವರನ್ನು ಕೈಬಿಡಲಾಗಿತ್ತು. ಫೆಬ್ರವರಿ-ಮಾರ್ಚ್ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಅವರ ಹೆಸರು ಪಟ್ಟಿಯಲ್ಲಿದೆ