ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಕಳೆದೆರೆಡು ದಿನಗಳಿಂದ ರಾಜಧರ್ಮದ ಬಗ್ಗೆ ಭಾರಿ ಚರ್ಚೆಗಳಾಗುತ್ತಿದೆ. ಬಿಜೆಪಿ ಸರ್ಕಾರ ರಾಜಧರ್ಮ ಪಾಲಿಸುತ್ತಿಲ್ಲ ಎಂದು ಕಾಂಗ್ರೆಸ್ ದೂಷಿಸಿದ್ದರೆ, ನಿಮ್ಮಿಂದ ನಾವು ರಾಜಧರ್ಮ ಕಲಿಯಬೇಕಾಗಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ಇದೀಗ ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಬಿಜೆಪಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜಧರ್ಮದ ಕುರಿತಾಗಿ ಟ್ವೀಟ್ ಮಾಡಿರುವ ಕಪಿಲ್ ಸಿಬಲ್, ‘ಕಾನೂನು ಸಚಿವರು ರಾಜಧರ್ಮವನ್ನು ನಮಗೆ ಭೋದಿಸಬೇಡಿ ಎಂದು ಹೇಳಿದ್ದಾರೆ. ನಾವು ಹೇಗೆ ಭೋದಿಸಲು ಸಾಧ್ಯ ಸಚಿವರೇ? ಗುಜರಾತ್ನಲ್ಲಿ ವಾಜಪೇಯಿ ಅವರ ಮಾತನ್ನೇ ಕೇಳದೇ ಇದ್ದವರು ನೀವು ನಮ್ಮ ಮಾತನ್ನು ಏಕೆ ಕೇಳುತ್ತೀರಿ?’ ಎಂದು ವ್ಯಂಗ್ಯವಾಡಿದ್ದಾರೆ.
ರಾಜಧರ್ಮವನ್ನು ಆಲಿಸುವುದು, ಕಲಿಯುವುದು ಮತ್ತು ಪರಿಪಾಲಿಸುವುದು ನಿಮ್ಮ ಸರ್ಕಾರದ ಬಲವಾದ ಅಂಶವೇ ಅಲ್ಲ! ಎಂದು ಸಿಬಲ್ ಕುಟುಕಿದ್ದಾರೆ.
ವಧುವಿಗಾಗಿ ಲಕ್ಷಾಂತರ ಖರ್ಚು ಮಾಡಿದ ವೃದ್ಧ
70 ವರ್ಷದ ವೃದ್ಧ ವ್ಯಕ್ತಿಯೊಬ್ಬರು ವಧು ಹುಡುಕಾಟಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡಿರುವ ವಿಚಿತ್ರ ಘಟನೆಯೊಂದು ನಡೆದಿದೆ. 70 ವಯಸ್ಸಾದರೆ ಸಾಕು ಹಲವರು ಊರು ಹೋಗು ಅನ್ನತ್ತೆ..ಕಾಡು...