BJP | ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ? : ಡಿಕೆಗೆ ಕೇಸರಿ ಡಿಚ್ಚಿ
ಬೆಂಗಳೂರು : ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು ಡಿ.ಕೆ.ಶಿವಕುಮಾರ್ ಅಸಹಾಯಕರೇ? ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ?ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ಕುಟುಕಿದೆ.
ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ.. ಕಾಂಗ್ರೆಸ್ ಒಂದು ಒಡೆದ ಮನೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ.ಎಂ.ಬಿ. ಪಾಟೀಲ್ ಹಾಗೂ ಅಶ್ವತ್ಥ್ ನಾರಾಯಣ ಅವರ ಭೇಟಿಯ ಬಗ್ಗೆ ಮಾತನಾಡಿದ #ಅಸಹಾಯಕಡಿಕೆಶಿ ಅವರೀಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ. ಹೀಗೇಕಾಯಿತು ಡಿ.ಕೆ.ಶಿವಕುಮಾರ್ ಅವರೇ?
ಚುನಾವಣೆಯ ಹೊಸ್ತಿಲಲ್ಲಿ @DKShivakumar ಜೊತೆ ಎಷ್ಟು ಮಂದಿ ನಿಲ್ಲಬಹುದು ಎಂದು ಕಾಂಗ್ರೆಸಿಗರು ಈಗಲೇ ನಿರ್ಧರಿಸಿರಬಹುದು.#ಮೀರ್ಸಾದಿಕ್ ಬಣದ ಜೊತೆಗೆ #ಅಸಹಾಯಕಡಿಕೆಶಿ ಅವರ ವಿರೋಧಿಗಳ ಸಾಲಿಗೆ ಈಗ ಮಾಜಿ ಸಂಸದೆ ರಮ್ಯಾ ಕೂಡಾ ಸೇರಿದ್ದಾರೆ.
ಡಿಕೆಶಿ ಅವರೇ, ಸಹೋದರ ಡಿ.ಕೆ.ಸುರೇಶ್ ಅವರಾದರೂ ನಿಮ್ಮ ಜೊತೆ ನಿಲ್ಲಬಹುದೇ?
— BJP Karnataka (@BJP4Karnataka) May 12, 2022
ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಡಿ.ಕೆ.ಶಿವಕುಮಾರ್ ಅವರೀಗ #ಅಸಹಾಯಕಡಿಕೆಶಿ ಆಗಿದ್ದಾರೆ.ಕೆಪಿಸಿಸಿ ಮನೆಯಲ್ಲಿ ಈಗ #ಮೀರ್ಸಾದಿಕ್ ಹಾವಳಿ ಜಾಸ್ತಿಯಾಗಿದ್ದು ನಿಜವೇ? ಗುಂಪುಗಾರಿಕೆ, ಬಣ, ಉಪಬಣ, ಆ ಬಣ ಈ ಬಣಗಳ ನಡುವೆಯೂ ಒಗ್ಗಟ್ಟಿನ ಮಂತ್ರವೇಕೆ?
ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ”, ಇದು #ಅಸಹಾಯಕಡಿಕೆಶಿ ಅವರ ಸದ್ಯದ ಸ್ಥಿತಿ.ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ.ರಮ್ಯಾ ಅವರನ್ನು #ಭ್ರಷ್ಟಾಧ್ಯಕ್ಷ ರ ವಿರುದ್ಧ ಛೂಬಿಟ್ಟಿದ್ದು #ಮೀರ್ಸಾದಿಕ್ ಅವರಿರಬಹುದೇ?
ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ?ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ?ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ #ಮೀರ್ಸಾದಿಕ್ ತಂತ್ರವಿದೆಯೇ?
ಚುನಾವಣೆಯ ಹೊಸ್ತಿಲಲ್ಲಿ ಡಿ.ಕೆ.ಶಿವಕುಮಾರ್ ಜೊತೆ ಎಷ್ಟು ಮಂದಿ ನಿಲ್ಲಬಹುದು ಎಂದು ಕಾಂಗ್ರೆಸಿಗರು ಈಗಲೇ ನಿರ್ಧರಿಸಿರಬಹುದು.#ಮೀರ್ಸಾದಿಕ್ ಬಣದ ಜೊತೆಗೆ #ಅಸಹಾಯಕಡಿಕೆಶಿ ಅವರ ವಿರೋಧಿಗಳ ಸಾಲಿಗೆ ಈಗ ಮಾಜಿ ಸಂಸದೆ ರಮ್ಯಾ ಕೂಡಾ ಸೇರಿದ್ದಾರೆ.ಡಿಕೆಶಿ ಅವರೇ, ಸಹೋದರ ಡಿ.ಕೆ.ಸುರೇಶ್ ಅವರಾದರೂ ನಿಮ್ಮ ಜೊತೆ ನಿಲ್ಲಬಹುದೇ ಎಂದು ಬಿಜೆಪಿ ಕುಟುಕಿದೆ. karnakata bjp-slams congress d k shivakumar