Ukraine | ಉಕ್ರೇನ್ ನಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ಸಾವು
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಕರ್ನಾಟಕದ ಮೂಲದ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಹಾವೇರಿ ಮೂಲದ ನವೀನ್ ಮೃತಪಟ್ಟಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.
ನವೀನ್ ಅವರು ಕಳೆದ 4 ವರ್ಷಗಳಿಂದ ಉಕ್ರೇನ್ನಲ್ಲಿ ನೆಲೆಸಿದ್ದರು.
ಇಂದು ಮುಂಜಾನೆ 7ಗಂಟೆ ಹೊತ್ತಿಗೆ ನವೀನ್ ಹಲವರ ಜತೆ ತಿಂಡಿ ಪಡೆಯಲು ರ್ಖೀವ್ನ ಗವರ್ನರ್ ಹೌಸ್ ಸಮೀಪ ನಿಂತಿದ್ದರು.
ಸುಮಾರು 8ಗಂಟೆ ಹೊತ್ತಿಗೆ ಅಲ್ಲಿ ರಷ್ಯಾ ಸೇನೆ ರಾಕೆಟ್ ದಾಳಿ ನಡೆಸಿದೆ.
ಈ ದಾಳಿಯಲ್ಲಿ ನವೀನ್ ಸಾವನ್ನಪ್ಪಿದ್ದಾರೆ. ಕಾರ್ಖೀವ್ನ ಶವಾಗಾರದಲ್ಲಿ ಮೃತದೇಹವಿದೆ.
ಇನ್ನು ಈ ಕುರಿತು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ಅರವಿಂದ್ ಬಾಗ್ಚಿ ಟ್ವೀಟ್ ಮಾಡಿದ್ದು, ಉಕ್ರೇನ್ನಲ್ಲಿ ರಷ್ಯಾ ನಡೆಸಿದ ದಾಳಿಗೆ ಭಾರತದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದನ್ನು ತಿಳಿಸಲು ವಿಷಾದಿಸುತ್ತೇವೆ.
ವಿದ್ಯಾರ್ಥಿಯ ಕುಟುಂಬಕ್ಕೆ ನಮ್ಮ ಸಾಂತ್ವನಗಳು ಎಂದು ಬರೆದುಕೊಂಡಿದ್ದಾರೆ. karnatak student Naveen was killed In Ukraine Says foreign ministry