ಬೆಂಗಳೂರು : ಕೃಷಿ ಕ್ಷೇತ್ರದಲ್ಲಿ ನವೀನ ತಂತ್ರಜ್ಞಾನ ಬಳಕೆ ಮತ್ತು ರೈತರಿಗೆ ಅನುಕೂಲ ಕಲ್ಪಿಸಲು ಹೊಸಹೊಸ ಹೆಜ್ಜೆಗಳನ್ನು ಇಡುತ್ತಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಮಹತ್ವದ ಬೆಳೆ ದರ್ಶಕ್-2020 ಆಪ್ ಅನ್ನು ಲೋಕಾರ್ಪಣೆಗೊಳಿಸಿದರು. ಸೆ.23 ಬೆಳೆ ಸಮೀಕ್ಷೆ ಅಪ್ಲೋಡ್ ಮಾಡಲು ಕೊನೆಯ ದಿನವಾಗಿದ್ದು, ರೈತರು ಆದಷ್ಟು ಬೇಗ ತಮ್ಮ ಜಮೀನಿನ ಸಮೀಕ್ಷೆ ಅಪ್ಲೋಡ್ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.
ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರಗಳ ಮಾಹಿತಿಯನ್ನು ಪಡೆಯಬಹುದು. ಅಲ್ಲದೇ ಬೆಳೆ ದರ್ಶಕ್-2020 ಆಪ್ ಮೂಲಕ ಅಪ್ಲೋಡ್ ಆದ ವಿವರಗಳು ಸರಿಯಾಗಿವೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಒಂದು ವೇಳೆ ರೈತರಾಗಲೀ ಅಥವಾ ಖಾಸಗಿ ನಿವಾಸಿಗಳು ಒಂದುವೇಳೆ ಬೆಳೆ ಸಮೀಕ್ಷೆ ಮಾಹಿತಿಯನ್ನು ತಪ್ಪಾಗಿ ದಾಖಲಿಸಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿಮಾಡಿಕೊಳ್ಳಲು ಬೆಳೆ ದರ್ಶಕ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.