ಅಲ್ಪಸಂಖ್ಯಾತರೇ, ಕಾಂಗ್ರೆಸ್ ನರಿ ಬುದ್ಧಿಯ ಬಗ್ಗೆ ಯೋಚಿಸಿ : ಬಿಜೆಪಿ bjp-Congress saaksha tv
ಬೆಂಗಳೂರು : ನೀವೆಂದಿಗೂ ಮುಸ್ಲಿಂ ಸಮುದಾಯದ ವಿಶ್ವಾಸಕ್ಕೆ ಅರ್ಹರಲ್ಲ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.
ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರುಮ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಸೋಲಿಸಲು ಅಲ್ಪಸಂಖ್ಯಾತರು ಸಂಘಟಿತರಾಗಬೇಕು ಎಂದು ಆಪೇಕ್ಷೆಪಟ್ಟರು.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಘಟಕ ಟಾಂಗ್ ನೀಡಿದೆ. ಕಾಂಗ್ರೆಸ್ಸಿಗರೇ, ಈ ಚಿತ್ರಗಳು ತೀರಾ ಹಳೆಯದೇನಲ್ಲ, ಕೇವಲ ಎರಡು ದಿನಗಳ ಹಿಂದೆಯಷ್ಟೇ ಪ್ರಧಾನಿ ಮೋದಿಯನ್ನು ಭೋಪಾಲ್ನಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ ಸಂದರ್ಭದ ಚಿತ್ರಗಳಿವು. ನಿಮ್ಮ ಹತಾಶೆ ನಮಗೆ ಅರ್ಥವಾಗುತ್ತದೆ, ನೀವೆಂದಿಗೂ ಮುಸ್ಲಿಂ ಸಮುದಾಯದ ವಿಶ್ವಾಸಕ್ಕೆ ಅರ್ಹರಲ್ಲ ಎಂದು ಕುಟುಕಿದೆ.
ಮುಸ್ಲಿಮರು ಒಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ, ಉಗ್ರಪ್ಪ ಅವರಿಗೆ ಬರೇ ನೋಟೀಸ್ ನೀಡಿದೆ. ಅಲ್ಪಸಂಖ್ಯಾತರೇ, ಕಾಂಗ್ರೆಸ್ ಪಕ್ಷದ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ ಎಂದು ಬಿಜೆಪಿ ಕರೆಕೊಟ್ಟಿದೆ.