BJP | ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಮಹಾತ್ಮ ಗಾಂಧಿಯೇ ಹೊರತು, ನಕಲಿ ಗಾಂಧಿಗಳಲ್ಲ
ಬೆಂಗಳೂರು : ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಮಹಾತ್ಮ ಗಾಂಧಿಯೇ ಹೊರತು, ಈ ನಕಲಿ ಗಾಂಧಿಗಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ 2ನೇ ದಿನದ ವಿಚಾರಣೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದು, ವಿಚಾರಣೆ ಮುಂದುವರೆದಿದೆ.
ಇದನ್ನ ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದಕ್ಕೆ ರಾಜ್ಯ ಬಿಜೆಪಿ ತಿರುಗೇಟು ನೀಡಿದ್ದು, ಸತ್ಯವೇ ನಮ್ಮ ತಾಯಿ – ತಂದೆ ಎನ್ನುತ್ತಾ ಸುಳ್ಳನ್ನೇ ಉಸಿರಾಡುವ #ಬುರುಡೆರಾಮಯ್ಯ ಅವರು,ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ಹೋರಾಟಕ್ಕಾಗಿ ಜೈಲು ಶಿಕ್ಷೆ ಅನುಭವಿಸಿದರು ಎಂದು ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ ಸ್ವಾತಂತ್ರ್ಯ ಯೋಧರ ಪಟ್ಟಕಟ್ಟಲು ಹೊರಟಿದ್ದಾರೆ.ಸ್ವಾತಂತ್ರ್ಯ ಯೋಧರಿಗೆ ಅವಮಾನವಿದು!
ಮಹಾತ್ಮ ಗಾಂಧಿ ನೇತೃತ್ವದ "ಕಾಂಗ್ರೆಸ್ ಚಳುವಳಿ" ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ನಿಜ.
ಆದರೆ, ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರ್ಯವನ್ನೇ ಅಪಹರಿಸಿತ್ತು.
ಸಿದ್ದರಾಮಯ್ಯನವರೇ, ತುರ್ತು ಪರಿಸ್ಥಿತಿಯ ದಿನಗಳನ್ನು ಒಮ್ಮೆ ನೆನಪಿಸಿಕೊಳ್ಳಿ.#FakeGandhisBachaoToolKit
— BJP Karnataka (@BJP4Karnataka) June 14, 2022
ಸಿದ್ದರಾಮಯ್ಯನವರೇ, ಈ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಬೇರೆ, ಮಹಾತ್ಮ ಗಾಂಧಿ ಬೇರೆ. ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಮಹಾತ್ಮ ಗಾಂಧಿಯೇ ಹೊರತು, ಈ ನಕಲಿ ಗಾಂಧಿಗಳಲ್ಲ. #ಬುರುಡೆರಾಮಯ್ಯ ಅವರು ಗಾಂಧಿ ಕುಟುಂಬದ ವಂಶ ವೃಕ್ಷದ ಬಗ್ಗೆ ಮೊದಲು ಅರಿತುಕೊಳ್ಳಬೇಕು.
ಸತ್ಯವೇ ನಮ್ಮ ತಾಯಿ – ತಂದೆ ಎನ್ನುತ್ತಾ ಸುಳ್ಳನ್ನೇ ಉಸಿರಾಡುವ #ಬುರುಡೆರಾಮಯ್ಯ ಅವರು,
ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ಹೋರಾಟಕ್ಕಾಗಿ ಜೈಲು ಶಿಕ್ಷೆ ಅನುಭವಿಸಿದರು ಎಂದು ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ ಸ್ವಾತಂತ್ರ್ಯ ಯೋಧರ ಪಟ್ಟಕಟ್ಟಲು ಹೊರಟಿದ್ದಾರೆ.
ಸ್ವಾತಂತ್ರ್ಯ ಯೋಧರಿಗೆ ಅವಮಾನವಿದು!#FakeGandhisBachaoToolKit
— BJP Karnataka (@BJP4Karnataka) June 14, 2022
ಮಹಾತ್ಮ ಗಾಂಧಿ ನೇತೃತ್ವದ “ಕಾಂಗ್ರೆಸ್ ಚಳುವಳಿ” ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ನಿಜ.ಆದರೆ, ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರ್ಯವನ್ನೇ ಅಪಹರಿಸಿತ್ತು.ಸಿದ್ದರಾಮಯ್ಯನವರೇ, ತುರ್ತು ಪರಿಸ್ಥಿತಿಯ ದಿನಗಳನ್ನು ಒಮ್ಮೆ ನೆನಪಿಸಿಕೊಳ್ಳಿ ಎಂದು ಬಿಜೆಪಿ ಕುಟುಕಿದೆ.