Karnataka BJP – ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದು ಕಾಂಗ್ರೆಸ್
ಬೆಂಗಳೂರು : ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದು ಕಾಂಗ್ರೆಸ್. ಅದೇ ಕಾಂಗ್ರೆಸ್ ಈಗ ಭಾರತ್ ಜೋಡೋ ಎಂಬ ಬೃಹನ್ನಾಟಕ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಕುಟುಕಿದೆ.
ಕಾಂಗ್ರೆಸ್ ಭಾರತ್ ಜೋಡೋ ಕಾರ್ಯಕ್ರಮದ ಬಗ್ಗೆ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಕಿಡಿಕಾರಿದೆ. ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದು ಕಾಂಗ್ರೆಸ್. ಅದೇ ಕಾಂಗ್ರೆಸ್ ಈಗ ಭಾರತ್ ಜೋಡೋ ಎಂಬ ಬೃಹನ್ನಾಟಕ ಮಾಡುತ್ತಿದೆ. ತಮ್ಮ ರಾಜಕೀಯ ಹಸಿವಿಗಾಗಿ ಭಾರತವನ್ನೇ ಇಭ್ಭಾಗ ಮಾಡಿದ ಕಾಂಗ್ರೆಸ್ ಇಂದು ಭಾರತವನ್ನು ಜೋಡಿಸುವ ಯಾತ್ರೆ ಮಾಡುತ್ತಿದೆ. ಕಾಂಗ್ರೆಸ್ಸಿಗರೇ, ಮೊದಲು ಹರಿದು ಹಂಚಿಹೋಗುತ್ತಿರುವ ಕಾಂಗ್ರೆಸ್ ಪಕ್ಷವನ್ನು ಜೋಡಿಸಿಕೊಳ್ಳಿ ಎಂದು ವ್ಯಂಗ್ಯವಾಡಿದೆ.
ಅಲ್ಲದೆ ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದು ಕಾಂಗ್ರೆಸ್. ಅದೇ ಕಾಂಗ್ರೆಸ್ ಈಗ ಭಾರತ್ ಜೋಡೋ ಎಂಬ ಬೃಹನ್ನಾಟಕ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಭಾರತವನ್ನು ಜೋಡಿಸುವ ಆಸೆಯಿದ್ದರೆ, ಪಾಕಿಸ್ಥಾನದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಲಿ.
ರಾಜ್ಯ ಸರ್ಕಾರದ ವಿರುದ್ಧ ಇಲ್ಲದ ಭ್ರಷ್ಟಚಾರದ ಬಗ್ಗೆ ಸುಳ್ಳು ಪುಕಾರು ಹಬ್ಬಿಸುವ ಕಾಂಗ್ರೆಸ್ ನಾಯಕರು, ಇಂದು ತಮ್ಮ ಅವಧಿಯಲ್ಲಾದ ಭ್ರಷ್ಟಚಾರವನ್ನು ರಾಮಲಿಂಗಾ ರೆಡ್ಡಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಅವರು ಕದ್ದು ಮುಚ್ಚಿ ಹೈಕಮಾಂಡ್ಗೆ ಕಪ್ಪಕೊಟ್ಟಿದ್ದು ನಿಜ ಅಲ್ಲವೇ?
ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹಣದಲ್ಲಿ ಸೋನಿಯಾ, ರಾಹುಲ್ ಗಾಂಧಿ ಭ್ರಷ್ಟಾಚಾರ ಮಾಡಿದರು. ನಕಲಿ ಗಾಂಧಿಗಳ ಹೆಸರಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟನ್ನು ಮಾಡಿಕೊಂಡಿದ್ದಾರೆ. ಅವರ ಋಣ ತೀರಿಸುವುದಾಗಿ ರಮೇಶ್ ಕುಮಾರ್ ಬಹಿರಂಗವಾಗಿ ಒಪ್ಪಿಕೊಂಡಿದ್ದರು.
ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ಅವರ ಮೇಲೆ 43 ಪ್ರಕರಣಗಳು ದಾಖಲಾಗಿದ್ದವು. ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಮೇಲೆ 50 ಸಾವಿರ ಕೋಟಿ ಅಕ್ರಮ ಆಸ್ತಿಗಳಿಕೆ ಪ್ರಕರಣ ದಾಖಲಾಗಿತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಲೋಕಾಯಕ್ತಕ್ಕೆ ತಿಲಾಂಜಲಿ ಇಟ್ಟಿತು. ಇದನ್ನೇ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಕುಟುಕಿದೆ.
Karnataka BJP slams karnataka Congress on twitter