ಯತೀಂದ್ರಗೆ ನಿಮ್ಮ ಗುಣ ಎಷ್ಟು ಬಂದಿದೆ : ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ Karnataka BJP saaksha tv
ಬೆಂಗಳೂರು : ಗಾಂಧಿ ಮನ ಕುಡುಕನಾದ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ ನೀವು ಯಾವ ಗಾಂಧಿಯ ಬಗ್ಗೆ ಹೇಳಿದ್ದು? ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ!?
ಸಿದ್ದರಾಮಯ್ಯನವರೇ, ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ
ಪ್ರಾಮಾಣಿಕವಾಗಿ ಹೇಳಿ ಸಿದ್ದರಾಮಯ್ಯನವರೇ, ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ?
ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ.
ಸಂಸ್ಕಾರ, ಗುಣ, ಸಾಮಥ್ರ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ ಎಂದು ಕುಟುಕಿದೆ.