‘100 ಕೋಟಿ ಕೋಡ್ತೀವಿ’ ಎಂದ ‘ಡಿಕೆಶಿ’ಗೆ ‘ಭ್ರಷ್ಟಾಧ್ಯಕ್ಷ’ ಎಂದ ಬಿಜೆಪಿ
ಬೆಂಗಳೂರು : ವ್ಯಾಕ್ಸಿನ್ ಖರೀದಿಗಾಗಿ ರಾಜ್ಯ ಕಾಂಗ್ರೆಸ್ ವತಿಯಿಂದ ನೂರು ಕೋಟಿ ಕೊಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಟ್ರಬಲ್ ಶೂಟರ್ ಕಾಲೆಳೆದಿದೆ.
ಡಿಕೆಶಿಯವರೇ ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದಷ್ಟು ಸುಲಭವಾಗಿ ಸಹಾಯ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ.
ಉಚಿತ ಲಸಿಕೆ ನೀಡಲು ನಿಮ್ಮ ಅಧಿನಾಯಕಿ ಸೋನಿಯಾ ಗಾಂಧಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕುವ ಯೋಜನೆ ರೂಪಿಸಿದ್ದೀರಾ?, ಜಗತ್ತಿನ ನಾಲ್ಕನೇ ಶ್ರೀಮಂತ ಮಹಿಳೆ ಇದುವರೆಗೂ ಕೋವಿಡ್ ಸಹಾಯ ಹಸ್ತ ಚಾಚಿಲ್ಲವೇಕೆ?
ದೆಹಲಿಯಿಂದ ಗೋವಾಕ್ಕೆ ಬಂದದ್ದಾಯಿತು, ಗೋವಾದಿಂದ ಇಟಲಿಗೋ..? ಎಂದು ಪ್ರಶ್ನಿಸಿದೆ.
ಸಂಕಷ್ಟದ ಸಮಯದಲ್ಲಿಬಿಟ್ಟಿ ಸಲಹೆ ನೀಡುವುದು, ಜನರ ದಾರಿ ತಪ್ಪಿಸುವುದು. ಇದು ಕಾಂಗ್ರೆಸ್ ಜನರಿಗೆ ಮಾಡುತ್ತಿರುವ ದ್ರೋಹ. ಭ್ರಷ್ಟಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ನಿಮಗೆ ನಿಜಕ್ಕೂ ಸಹಾಯ ಮಾಡುವ ಮನಸಿದ್ದರೆ ಪೆÇಳ್ಳು ಆರೋಪ ಮಾಡುವುದನ್ನು ಬಿಟ್ಟು ಒಂದಿಷ್ಟು ಸುಮ್ಮನಿದ್ದು ಬಿಡಿ.
ಸರ್ಕಾರಕ್ಕೆ ಸವಾಲೆಸೆಯುವ ನೀವು, ರಾಜೀವ್ ಗಾಂಧಿ ಫೌಂಡೇಶನ್ ಖಾತೆಯಲ್ಲಿ ಲಕ್ಷಾಂತರ ಕೋಟಿ ಹಣ ಕೊಳೆಯುತ್ತಿದೆ. ನಿಮ್ಮ ಆದಾಯ ಮೀರಿದ ಆಸ್ತಿಯ ತನಿಖೆ ನಡೆಯುತ್ತಿದೆ.
ಇದ್ಯಾವುದೂ ನ್ಯಾಯ ಮಾರ್ಗದ ಗಳಿಕೆಯಲ್ಲ. ಸಹಾಯದ ಹೆಸರಿನಲ್ಲೂ ಕಪ್ಪು ಬಿಳುಪು ದಂಧೆಗೆ ಇಳಿದಿದ್ದೀರಾ?, ಉಚಿತ ಲಸಿಕೆಗೆ ನಾವು ಸಹಾಯ ಮಾಡುತ್ತೇವೆ ಎಂದು ನೀವು ಹೇಳಿದಾಗಲೇ ಅತ್ತೆಯ ದುಡ್ಡನ್ನು ಅಳಿಯನಿಗೆ ದಾನ ಮಾಡುವ ಚಿಲ್ಲರೆ ಯೋಜನೆ ರೂಪಿಸುತ್ತಿರಬಹುದೆಂಬ ಶಂಕೆಯಿತ್ತು.
ಈಗ 100 ಕೋಟಿ ನೀಡುವ ಘೋಷಣೆ ಮಾಡಿದ್ದಾರೆ. ಇದು ಜನರ ದಾರಿ ತಪ್ಪಿಸುವ ಕಾಂಗ್ರೆಸ್?ನ ಮತ್ತೊಂದು ಯೋಜನೆಯಷ್ಟೇ ಎಂದು ಬಿಜೆಪಿ ಕಿಡಿಕಾರಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.