ಎಚ್ಡಿಕೆ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ
ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ ಎಂದು ರಾಜ್ಯ ಬಿಜೆಪಿ ಟೀಕೆ ಮಾಡಿದೆ.
ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ʼಬಲ್ಲಿದ ಜನರ ಪಕ್ಷʼ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಗೆ ರಾಜ್ಯ ಬಿಜೆಪಿ ಆಕ್ರೋಶ ಹೊರಹಾಕಿದೆ.
ಕುಮಾರಸ್ವಾಮಿ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ಕುಮಾರಸ್ವಾಮಿಯವರೇ ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ. ನಿಮ್ಮಂತವರ ಯೂಟರ್ನ್ ನೀತಿಗಾಗಿಯೇ ಕಗ್ಗದಲ್ಲಿ ಸಾಲೊಂದು ರಚಿತವಾಗಿದೆ ಎಂದು ಅವರದ್ದೇ ಶೈಲಿಯಲ್ಲಿ ಟಾಂಗ್ ನೀಡಿದೆ.
ಬಾನೊಳಿರುವುದೆ ಪಕ್ಷಿ ಪಾರ್ವ ದಾರಿಯ ನಕ್ಷೆ?
ಮೀನು ನೀರೊಳು ನುಸುಳೆ ಪಥನಿಯಮವಿಹುದೆ?
ಏನೊ ಜೀವನವನೆಳೆವುದೇನೊ ನೂಕುವುದದನು ।
ನೀನೊಂದು ಗಾಳಿಪಟ – ಮಂಕುತಿಮ್ಮ।।
ಎಚ್ಡಿಕೆ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ. ಕರ್ನಾಟಕದ ರಾಜಕಾರಣದಲ್ಲಿ ಎಚ್ಡಿಕೆ ಅವರಂತಹ ಗಾಳಿಪಟದ ವ್ಯಕ್ತಿತ್ವ ಹೊಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ ಎಂದು ಬಿಜೆಪಿ ಟೀಕೆ ಮಾಡಿದೆ.
ಆವ ಕಡೆ ಹಾರುವುದೋ!
ಆವ ಕಡೆ ತಿರುಗುವುದೋ?
ಆವಾಗಳಾವ ಕಡೆಗೆರಗುವುದೋ ಹಕ್ಕಿ!
ಎಂಬಂತಿದೆ ಎಚ್ಡಿಕೆ ರಾಜಕೀಯ ಧೋರಣೆ.
ಸ್ವಂತಿಕೆ ಇಲ್ಲದವರು ವಾಜಪೇಯಿ ಅವರಂಥವರನ್ನೂ ಟೀಕಿಸುವುದು ಚೋದ್ಯವಲ್ಲದೆ ಮತ್ತೇನು ಎಂದು ಬಿಜೆಪಿ ಪ್ರಶ್ನಿಸಿದೆ.
ಕರ್ನಾಟಕದ ರಾಜಕಾರಣದಲ್ಲಿ ಎಚ್ಡಿಕೆ ಅವರಂತಹ ಗಾಳಿಪಟದ ವ್ಯಕ್ತಿತ್ವ ಹೊಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ.
ಆವ ಕಡೆ ಹಾರುವುದೋ!
ಆವ ಕಡೆ ತಿರುಗುವುದೋ?
ಆವಾಗಳಾವ ಕಡೆಗೆರಗುವುದೋ ಹಕ್ಕಿ!
ಎಂಬಂತಿದೆ ಎಚ್ಡಿಕೆ ರಾಜಕೀಯ ಧೋರಣೆ.ಸ್ವಂತಿಕೆ ಇಲ್ಲದವರು ವಾಜಪೇಯಿ ಅವರಂಥವರನ್ನೂ ಟೀಕಿಸುವುದು ಚೋದ್ಯವಲ್ಲದೆ ಮತ್ತೇನು?#ಗಾಳಿಪಟಎಚ್ಡಿಕೆ
— BJP Karnataka (@BJP4Karnataka) April 4, 2022
ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು ।
ಕಡುಬ ನುಂಗುವುದು, ಕಹಿಮದ್ದ ಕುಡಿಯುವುದು ॥
ದುಡುಕಿ ಮತಿದಪ್ಪುವುದು, ತಪ್ಪನೊಪ್ಪೆನ್ನುವುದು |
ಮಾಜಿ #LuckyDipCMHDK ಅವರಿಗೆ ಇದೇ ಬದುಕು ತಾನೇ ಎಂದು ಬಿಜೆಪಿ ಕುಟುಕಿದೆ.
karnataka bjp twitter war against H D Kumaraswamy









