Karnataka Budget 2021 : ಅಭಿವೃದ್ಧಿ ನಿಗಮಗಳಿಗೆ ಬಂಪರ್
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡನೆ ಮಾಡಿರುವ ಬಜೆಟ್ ನಲ್ಲಿ ವಿವಿಧ ಅಭಿವೃದ್ಧಿ ನಿಗಮಗಳಿಗೆ ಬಂಪರ್ ಘೋಷಣೆ ಮಾಡಿದ್ದಾರೆ. ಲಿಂಗಾಯತ ಅಭಿವೃದ್ಧಿ ನಿಗಮ ಈಗಾಗಲೇ ಘೋಷಣೆ ಮಾಡಲಾಗಿದ್ದು, ಅದಕ್ಕಾಗಿ 500 ಕೋಟಿ ರೂ ಅನುದಾನ ಘೋಷಣೆ ಮಾಡಿದ್ದು, ಈಗಾಗಲೇ 100 ಕೋಟಿ ಬಿಡುಗಡೆ ಆಗಿದೆ ಎಂದು ಬಜೆಟ್ ಭಾಷಣದಲ್ಲಿ ಸಿಎಂ ತಿಳಿಸಿದ್ದಾರೆ.
ಇನ್ನುಳಿದಂತೆ ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಪರಿಶಿಷ್ಠ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿವಿಧ ಅಭಿವೃದ್ಧಿ ನಿಗಮಗಳಿಗೆ ಒಟ್ಟಾರೆ 500 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂಪಾಯಿ ಘೋಷಿಸಿದ್ದಾರೆ.
ಇದಲ್ಲದೆ ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ 1500 ಕೋಟಿ ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಇಲಾಖೆ ಅಧೀನದಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, 400 ಉರ್ದು ಶಾಳೆಗಳನ್ನು ಘೋಷಣೆ ಮಾಡಿದ್ದು, ಮಾದರಿ ಶಾಲೆ ಹಾಗೂ ಕಾಲೇಜ್ ಗಳಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು ಎಂದಿದ್ದಾರೆ.