Karnataka Budget 2021 Live : ಅನುಗ್ರಹ ಯೋಜನೆ ಮುಂದುವರಿಕೆ
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಜೆಟ್ ನಲ್ಲಿ ಸಿದ್ದರಾಮಯ್ಯ ಸರ್ಕಾರದ ಅನುಗ್ರಹ ಯೋಜನೆ ಮುಂದುವರಿಕೆ ಮಾಡಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು 2021 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ, ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸಿದ್ದರಾಮಯ್ಯ ಸರ್ಕಾರದ ಅನುಗ್ರಹ ಯೋಜನೆ ಮುಂದುವರಿಕೆ ಮಾಡಿದ್ದಾರೆ.
ಅನುಗ್ರಹ ಯೋಜನೆ ಕೈಬಿಡಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ರು, ಅನುಗ್ರಹವನ್ನ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದರು.
ಇನ್ನು ಬಜೆಟ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮಥ್ರ್ಯವುಳ್ಳ ಐಸಿಯು ಸ್ಥಾಪನೆ, ದತ್ತಾಂಶ ಕೇಂದ್ರ ಸೈಬರ್ ಸುರಕ್ಷತೆಗೆ ಆದ್ಯತೆ , 16 ಹೊಸ ಬಸ್ ಡಿಪೆÇೀ ನಿರ್ಮಾಣ ಮಾಡಲಾಗುವುದು. ಹೊನ್ನಾವರದ ಕಾಸರಕೋಡ ಬಂದರು ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ-66 ಭಾರತಮಾಲಾ ಯೋಜನೆಯಡಿ 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಚತುಷ್ಪಥ ಸಂಪರ್ಕ ರಸ್ತೆ ನಿರ್ಮಿಸಲು ಕ್ರಮ. ಮಂಗಳೂರು-ಪಣಜಿ ನಡುವೆ ಜಲಮಾರ್ಗಗಳ ಅಭಿವೃದ್ಧಿ. ಕೇಂದ್ರ ಸರ್ಕಾರದ ರಾಷ್ಟ್ರೀಯ ಜಲಮಾರ್ಗಗಳ ಪ್ರಾಧಿಕಾರದ ಧನಸಹಾಯದೊಂದಿಗೆ ಒಟ್ಟು 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಜಲಮಾರ್ಗಗಳ ಅಭಿವೃದ್ಧಿಗೆ ಕ್ರಮ. ಯಾದಗಿರಿ ಜಿಲ್ಲೆಯ ಕೆಡಚೂರಿನಲ್ಲಿ 1,478 ಕೋಟಿ ರೂ. ವೆಚ್ಚದಲ್ಲಿ ಬಲ್ಕ್? ಡ್ರಗ್ ಪಾರ್ಕ್ ಹಾಗೂ ಮಂಗಳೂರಿನ ಗಂಜಿಮಠದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ಪ್ಲಾಸ್ಟಿಕ್ ಪಾರ್ಕ್ ಅಭಿವೃದ್ಧಿ. ಬೀದರ್ ನ ಕೃಷಿ ಉಪಕರಣ ತಯಾರಿಕಾ ಕ್ಲಸ್ಟರ್ ನಲ್ಲಿ ಬರುವ ಕಯಗಾರಿಕೆಗಳಿಗೆ ವಿಶೇಷ ಪೆÇ್ರೀತ್ಸಾಹಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.