Karnataka Budget 2021 Live : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ.
ಬೆಂಗಳೂರು : ಬಜೆಟ್ ನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಘೋಷಣೆ ಮಾಡಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು 2021 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಘೋಷಣೆ, ಡಾ.ಡಿ.ಎಂ ನಂಜುಂಡಪ್ಪ ವರದಿಯಂತೆ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ 3000 ಕೋಟಿ, ಕೃಷ್ಣಾ ಭಾಗ್ಯ ಜಲನಿಗಮಕ್ಕೆ 5600 ಕೋಟಿ ರೂ. ಘೋಷಣೆ ಮಾಡಿದ್ದಾರೆ.
ಅಲ್ಲದೆ ವಿಜಯನಗರ ನೂತನ ಜಿಲ್ಲೆಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ಮೂಲಸೌಕರ್ಯ ಒದಗಿಸಲು ಅನುದಾನ ಜಾರಿ. ನೌಕರರಿಗೆ ಸಿಗುವ ಸೌಲಭ್ಯ ಮಾಹಿತಿಗೆ HRMS-2 ಜಾರಿ, ನೌಕರರು ಮತ್ತು ಅವಲಂಬಿತರಿಗೆ ನಗದು ರಹಿತ ಶಸ್ತ್ರಚಿಕಿತ್ಸೆಗೆ ಅನುದಾನ, ಜ್ಯೋತಿ ಸಂಜೀವಿನಿ ಅಡಿ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.