ಚಿಕ್ಕಬಳ್ಳಾಪುರ : ಇಷ್ಟು ದಿನಗಳ ವರೆಗೂ ಲಾಕ್ ಡೌನ್ ನಿಂದಾಗಿ ಮನೆಯಲ್ಲಿಯೇ ಕಾಲ ಕಳೆದಿದ್ದ ಜನರೆಲ್ಲರೂ ಇದೀಗ ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೆ ಅನೇಕ ಪ್ರವಾಸಿಗಳಿಗೆ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಅದರಲ್ಲೂ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಈಗ ಅಂದ್ರೆ ಮಳೆಗಾಲದಲ್ಲಿ ನಂದಿ ಬೆಟ್ಟ ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಬೆಳ್ಳಂಬೆಳಗ್ಗೆ ಸೂರ್ಯೋದಯದ ವೇಳೆಗೆ ನಂದಿ ಬೆಟ್ಟದ ಸುತ್ತಲೂ ಅಕ್ಷರ ಸಹ ಸ್ವರ್ಗದಂತೆ ಕಾಣಿಸುತ್ತೆ. ಹೀಗಾಗಿಯೇ ಸಾಕಷ್ಟು ಜನರು ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ಹೋಗುತ್ತಾರೆ. ಇದೀಗ ಪ್ರಕೃತಿಯ ಸೌಂದರ್ಯ ಸವಿಯಲು ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳುತ್ತಿರುವ ಪ್ರವಾಸಿಗರಿಗೆ ನಿರಾಸೆಯುಂಟಾಗಿದೆ. ಯಾಕಂದ್ರೆ ಕೊರೊನಾ ಆತಂಕದ ಹಿನ್ನೆಲೆ ಲಾಕ್ ಡೌನ್ ಅವಧಿ ಮುಗಿದರೂ ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧನ ಹೇರಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೂ ಕೆಲ ಪ್ರವಾಸಿಗರು ನಂದಿಬೆಟ್ಟಕ್ಕೆ ಹೋಗುತ್ತಿದ್ದಾರೆ. ಮುಂಜಾನೆಯೇ ನೂರಾರು ಬೈಕ್ ಗಳು ಬೆಟ್ಟದ ಕ್ರಾಸ್ ನತ್ತ ತೆರಳಿದ್ದು, ಎಂಟ್ರಿ ಕ್ಲೋಸ್ ಆಗಿರುವುದನ್ನು ಕಂಡು ನಿರಾಸೆಯಿಂದ ಮತ್ತೆ ಮನೆಗಳತ್ತ ಹಿಂತಿರುಗುತ್ತಿದ್ದಾರೆ.
ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ
ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...








