covid-meeting | ಶಾಲೆ ಓಪನ್.. ಕೋವಿಡ್ ರೂಲ್ಸ್ ಮತ್ತಷ್ಟು ಸಡಿಲಿಕೆ
ಬೆಂಗಳೂರು : ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋವಿಡ್ ಸಭೆ ನಡೆಯಲಿದೆ.
ಇಂದು ಮಧ್ಯಾಹ್ನ ಒಂದು ಗಂಟೆ ಸರಿಸುಮಾರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಲಿದ್ದಾರೆ. karnataka cm basavaraja bommai covid meeting saaksha tv
ಈ ವೇಳೆ ಸದ್ಯ ಜಾರಿಯಲ್ಲಿರುವ ಶೇ 50ರಷ್ಟು ರೂಲ್ಸ್ ಸಡಿಲಿಕೆ, ಬೆಂಗಳೂರಿನಲ್ಲಿ ಶಾಲಾಗಳ ರೀ ಓಪನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
ಅಂದಹಾಗೆ ಸದ್ಯ ಜಾರಿಯಲ್ಲಿರುವ ಹಾಫ್ ರೂಲ್ಸ್ ಬಗ್ಗೆ ಹೋಟೆಲ್ ಉದ್ಯಮ, ಮದ್ಯ ಮಾರಾಟ ಉದ್ಯಮ, ಸಿನಿಮಾ, ನಾಟಕ ರಂಗಗಳಿಂದ ವಿರೋಧ ವ್ಯಕ್ತವಾಗಿದೆ.
ಈ ನಿಯಮಗಳನ್ನು ಸಡಿಲಗೊಳಿಸಬೇಕು ಎಂದು ಬಹುತೇಕ ಸಚಿವರು, ಶಾಸಕರಿಂದಲೂ ಒತ್ತಾಯ ಕೇಳಿ ಬಂದಿದೆ. ಹೀಗಾಗಿ ರೂಲ್ಸ್ ನಲ್ಲಿ ಸಡಿಲಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಖ್ಯವಾಗಿ ಬೆಂಗಳೂರಿನಲ್ಲಿ ಶಾಲೆಗಳನ್ನು ಮತ್ತೆ ಆರಂಭಿಸಬೇಕು ಎಂಬ ಕೂಗು ಜೋರಾಗಿ ಕೇಳಿಬರುತ್ತಿದೆ. ಶಿಕ್ಷಣ ಸಚಿವರು ಕೂಡ ಈ ಬಗ್ಗೆ ಹೆಚ್ಚಿನ ಒಲವು ಇಟ್ಟುಕೊಂಡಿದ್ದಾರೆ.
ಹೀಗಾಗಿ ಇಂದಿನ ಸಭೆಯಲ್ಲಿ ತಜ್ಞರ ಸಲಹೆ ಪಡೆದುಕೊಂಡು, ಒಂದು ನಿರ್ದಿಷ್ಠ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.