Karnataka Congress – ತೆಲಂಗಾಣದಲ್ಲಿ ಬಿಜೆಪಿಯ ಕುದುರೆ ವ್ಯಾಪಾರದ ಬಣ್ಣ ಬಯಲು
ಬೆಂಗಳೂರು : ಟಿಆರ್ ಎಸ್ ನ ನಾಲ್ವರು ಶಾಸಕರನ್ನು ಬಿಜೆಪಿಗೆ ಸೆಳೆಯಲು ಯತ್ನಿಸಿದ ಆರೋಪದಡಿ ಮೂವರನ್ನ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.
ಇತ್ತ ಇ ಶಾಸಕರಿಗೆ ಪಕ್ಷಾಂತರ ಮಾಡಲು ಬಿಜೆಪಿ 100 ಕೋಟಿ ರೂಪಾಯಿ ಆಫರ್ ಕೊಟ್ಟಿತ್ತು ಎಂದು ಟಿಆರ್ ಎಸ್ ಆರೋಪಿಸಿದೆ.
ಈ ಪ್ರಕರಣ ಸಂಬಂಧ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ತೆಲಂಗಾಣದಲ್ಲಿ ಬಿಜೆಪಿಯ ಕುದುರೆ ವ್ಯಾಪಾರದ ಬಣ್ಣ ಬಯಲಾಗಿದೆ.
ಬಿಜೆಪಿಗೆ ಈಗ ಭ್ರಷ್ಟ ಹಣದ ಮದವೇರಿದೆ, ಪ್ರಜಾಪ್ರಭುತ್ವವನ್ನೇ ಖರೀದಿಸಲು ಹೊರಟಿದೆ ಎಂದು ಆಕ್ರೋಶ ಹೊರಹಾಕಿದೆ.
ಅಲ್ಲದೆ ತೆಲಂಗಾಣದ ಆಪರೇಷನ್ ಕಮಲದ ವ್ಯವಹಾರದಲ್ಲಿ ಶಾಸಕರ ಮುಖಂಡತ್ವ ವಹಿಸುವವರಿಗೆ ₹100 ಕೋಟಿ. ಬರುವ ಪ್ರತಿ ಶಾಸಕರಿಗೆ ₹50 ಕೋಟಿ. ಈ ಮೊತ್ತದ ಹಣ ಬಂದಿದ್ದು ಹೇಗೆ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.