karnataka election 2023 | ಹುಲಿ’ಯಾಗೆ ಬಲೆ ಬೀಸೋದು ಯಾರು ?
ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿ ಖರ್ಚಿಯಲ್ಲಿ ಕುಳಿತುಕೊಳ್ಳುವ ಕನಸಿನಲ್ಲಿದ್ದಾರೆ.
ಸಿದ್ದರಾಮೋತ್ಸವದ ಬಳಿಕ ರಾಜ್ಯ ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯ ಘರ್ಜನೆ ಜೋರಾಗಿದೆ.
ನಃ ಭೂತೋ ನಃ ಭವಿಷ್ಯತಿ ಎಂಬಂತೆ ರಾಜ್ಯದ ಮೂಲೆ ಮೂಲೆಯಿಂದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರು ಲಗ್ಗೆ ಇಟ್ಟಿದ್ದರು.
ಜೊತೆಗೆ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಹೆಸರು ಹೇಳುತ್ತಿದ್ದಂತೆ ಜನರಿಂದ ಬರುತ್ತಿರುವ ಸ್ಪಂದನೆ ನೋಡಿದ್ರೆ ಸದ್ಯಕ್ಕೆ ಸಿದ್ದರಾಮಯ್ಯಗೆ ಭಾರಿ ಜನ ಬೆಂಬಲ ಇರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ.
ಇದನ್ನೆ ಬಳಸಿಕೊಳ್ಳುಲು ಪ್ಲಾನ್ ಮಾಡಿಕೊಂಡಿರುವ ಸಿದ್ದರಾಮಯ್ಯ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಚುನಾವಣೆ ಒಳಗಡೆ ಮತ್ತಷ್ಟು ಕಾರ್ಯಕ್ರಮಗಳನ್ನು ಮಾಡಲು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ.
ಆದ್ರೆ ಸಿದ್ದರಾಮಯ್ಯಗೆ ಈವರೆಗೂ ಕ್ಷೇತ್ರ ನಿಗದಿಯಾಗಿಲ್ಲ. ಸದ್ಯ ಅವರು ಬಾದಾಮಿ ಕ್ಷೇತ್ರದ ಶಾಸಕರಾಗಿದ್ದರೂ ಅಲ್ಲಿಂದ ಮತ್ತೆ ಸ್ಪರ್ಧಿಸೋದು ಡೌಟ್ ಆಗಿದೆ.
ಈ ನಡುವೆ ಅವರು ಮತ್ತೆ ವರುಣಾ ಕ್ಷೇತ್ರದಿಂದಲೇ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಅವರನ್ನ ಈ ಬಾರಿ ಸೋಲಿಸಲೇಬೇಕೆಂದು ಬಿಜೆಪಿ ನಾಯಕರು ಕೂಡ ಕಂಕಣ ಕಟ್ಟಿಕೊಂಡಿದ್ದಾರೆ.
ಅದರಂತೆ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಕಣಕ್ಕಿಳಿದರೇ ಇತ್ತ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನ ಅಖಾಡಕ್ಕಿಳಿಸಲು ಕೇಸರಿ ಪಡೆ ಪ್ಲಾನ್ ಮಾಡಿಕೊಂಡಿದೆ.
ಇತ್ತ ಬಾದಾಮಿಯಿಂದಲೇ ಸಿದ್ದರಾಮಯ್ಯ ಸ್ಪರ್ಧಿಸುವುದಾದ್ರೆ ಅಲ್ಲಿ ಶ್ರೀ ರಾಮುಲು ಸ್ಟ್ರಾಂಗ್ ಪೈಪೋಟಿ ನೀಡಲು ಸಜ್ಜಾಗಿದ್ದಾರೆ.
ಒಟ್ಟಾರೆ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಿದ್ರೂ ಅವರ ವಿರುದ್ಧ ಬಲಿಷ್ಠ ಅಭ್ಯರ್ಥಿಯನ್ನ ಹಾಕಿ ಕಟ್ಟಿಹಾಕಬೇಕು ಎಂದು ಬಿಜೆಪಿ ಬಿಗ್ ಬಾಸ್ ಗಳು ಪ್ಲಾನ್ ಮಾಡಿಕೊಂಡಿದ್ದಾರೆ.
ಆದ್ರೆ ಕೇಸರಿ ಪಡೆಯ ಈ ಪ್ಲಾನ್ ವರ್ಕೌಟ್ ಆಗುತ್ತಾ ? ಅಥವಾ ಕಮಲ ಪಡೆಗೆ ಹುಲಿಯಾ ಟಕ್ಕರ್ ಕೊಡ್ತಾರಾ ಅನ್ನೋದನ್ನ ಕಾದು ನೋಡಬೇಕು.