ಚಿತ್ರರಂಗಕ್ಕೆ ಹಿಡಿದಿದ್ದ ಗ್ರಹಣ ಮುಕ್ತಾಯ : ಇಂದಿನಿಂದ ಕರ್ನಾಟಕ ಫುಲ್ ಓಪನ್
ಬೆಂಗಳೂರು : ಬರೋಬ್ಬರಿ ಐದು ತಿಂಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಹಿಡಿದಿದ್ದ ಗ್ರಹಣ ಬಿಟ್ಟಿದೆ.
ಇಂದಿನಿಂದ ಶೇಕಾಡ 100ರಷ್ಟು ಆಸನ ಭರ್ತಿಗೆ ಅವಕಾಶ ಸಿಕ್ಕಿದೆ. ಹೀಗಾಗಿ ಗಾಂಧಿನಗರದಲ್ಲಿ ಮತ್ತೆ ಸಂಭ್ರಮ ಮನೆ ಮಾಡಿದೆ.
ಇದಲ್ಲದೆ ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್, ಕ್ಲಬ್ ಎಲ್ಲದಕ್ಕೂ ಅನುಮತಿ ದೊರೆತ್ತಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವುದರಿಂದ ರಾಜ್ಯ ಸರ್ಕಾರ ಕಳೆದ 25ರಂದು ಅಕ್ಟೋಬರ್ 1ರಂದು ಎಲ್ಲದಕ್ಕೂ 100% ರಷ್ಟು ಅನುಮತಿ ಕೊಟ್ಟು ಆದೇಶ ಹೊರಡಿಸಿತ್ತು.
ಈ ನಿಟ್ಟಿನಲ್ಲಿ ಇಂದಿನಿಂದ ಎಲ್ಲವೂ ಸಂಪೂರ್ಣವಾಗಿ ಅನ್ ಲಾಕ್ ಆಗಿದೆ.
ಇತ್ತ ಕೊರೊನಾ ಕಾಟದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಸ್ಯಾಂಡಲ್ವುಡ್ ಮಬ್ಬಿನಲ್ಲಿತ್ತು.
ಇಂದು ಕೊರೊನಾ ಕರಾಳಮೋಡಗಳು ಸರಿದಿದ್ದು, ಭರವಸೆಯ ಬೆಳಕು ಮೂಡಿದೆ.
ಇನ್ನು ಶೇಕಡಾ 50% ನಿಬರ್ಂಧದ ನಡುವೆಯೇ ಕೆಲ ಚಿತ್ರಗಳು ರಿಲೀಸ್ ಆಗಿದ್ದರೂ ಅಷ್ಟೇನೂ ಉತ್ತಮ ರೆಸ್ಪಾನ್ಸ್ ಸಿಕ್ಕಿರಲಿಲ್ಲ.
ಈಗ 100% ಆಸನ ಭರ್ತಿಗೆ ಅವಕಾಶ ಸಿಕ್ಕಿರೋದ್ರಿಂದ, ಮೊದಲ ಚಿತ್ರವಾಗಿ ‘ಕಾಗೆ ಮೊಟ್ಟೆ’ ಬಿಡುಗಡೆ ಆಗ್ತಿದೆ.