ಪ್ರವಾಹಪೀಡಿತ ಜಿಲ್ಲೆಗಳಿಗೆ ಕರ್ನಾಟಕ ಸರ್ಕಾರದಿಂದ ತುರ್ತು ಪರಿಹಾರ ನಿಧಿ ಬಿಡುಗಡೆ Karnataka emergency relief
ಬೆಂಗಳೂರು, ಅಕ್ಟೋಬರ್19: ಕರ್ನಾಟಕ ರಾಜ್ಯವು ಪ್ರವಾಹದಿಂದಾಗಿ ಸಾಕಷ್ಟು ನಷ್ಟವನ್ನು ಅನುಭವಿಸಿದೆ. ಈ ವಾರ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ರಾಜ್ಯದ ಉತ್ತರ ಮತ್ತು ಕರಾವಳಿ ಪ್ರದೇಶದ ಡಜನ್ ಜಿಲ್ಲೆಗಳಿಗೆ ಕರ್ನಾಟಕ ಸರ್ಕಾರ 86 ಕೋಟಿ ರೂ. ತುರ್ತು ಪರಿಹಾರ ಸಹಾಯವನ್ನು ಬಿಡುಗಡೆಗೊಳಿಸಿದೆ. Karnataka emergency relief
ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ 86 ಕೋಟಿ ರೂ.ಗಳ ಪರಿಹಾರ ಸಹಾಯವನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೈರುತ್ಯ ಮಾನ್ಸೂನ್ನಿಂದಾಗಿ ಭಾರಿ ಮಳೆ ಮತ್ತು ಪ್ರವಾಹಕ್ಕೆ ಬಾಗಲಕೋಟೆ , ಬಳ್ಳಾರಿ, ಬೆಳಗಾವಿ, ಬೀದರ್, ಗದಗ್, ಕಲಬುರಗಿ, ಕೊಡಗು, ಕೊಪ್ಪಲ್, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಉಡುಪಿ ಜಿಲ್ಲೆಗಳು ಸಿಲುಕಿದವು.
ಆಗಸ್ಟ್ನಿಂದ ತಮ್ಮ ಹೊಲಗಳಿಗೆ ಪ್ರವಾಹ ಉಂಟಾಗಿ ಬೆಳೆ ನಷ್ಟ ಅನುಭವಿಸಿದ 51,810 ರೈತರಿಗೆ ರಾಜ್ಯ ಸರ್ಕಾರ 37 ಕೋಟಿ ರೂ.ಗಳನ್ನು ಇನ್ಪುಟ್ ಸಬ್ಸಿಡಿಯಾಗಿ ಮಂಜೂರು ಮಾಡಿದೆ ಎಂದು ಅಧಿಕಾರಿಗಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರ – ಚೆನ್ನೈ ಆಸ್ಪತ್ರೆಗೆ ಶಿಫ್ಟ್
ರಾಜ್ಯದ ಭೀಕರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದಾದ್ಯಂತ ಭಾರಿ ಮಳೆ ಮತ್ತು ಪ್ರವಾಹದ ಪರಿಣಾಮದ ಬಗ್ಗೆ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿವರಿಸಿದ್ದೇನೆ. ಕೇಂದ್ರದ ಬೆಂಬಲ ಮತ್ತು ನಮಗೆ ಸಹಾಯ ಮಾಡುವ ಬಗ್ಗೆ ಅವರು ಭರವಸೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದರೂ, ಪ್ರಮುಖ ನದಿಗಳ ಅಣೆಕಟ್ಟುಗಳು / ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುಗಡೆಯಾಗುವುದರಿಂದ ಮತ್ತು ಅವುಗಳ ಉಪನದಿಗಳು ಉಕ್ಕಿ ಹರಿಯುವುದರಿಂದ ಪೀಡಿತ ಜಿಲ್ಲೆಗಳು ಪಟ್ಟಣಗಳು ಮತ್ತು ಹಳ್ಳಿಗಳು ಪ್ರವಾಹಕ್ಕೆ ತುತ್ತಾಗಿವೆ.
ಪ್ರವಾಹ ಪೀಡಿತ ಜನರನ್ನು ವೈದ್ಯಕೀಯ ಸೌಲಭ್ಯಗಳೊಂದಿಗೆ ಸ್ಥಾಪಿಸಲಾದ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಒಂದು ಡಜನ್ ಎನ್ಡಿಆರ್ಎಫ್ ತಂಡಗಳು ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ