ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬಿಜೆಪಿ ಜನ ಸಂವಾದ ಸಮಾವೇಶವನ್ನು ಆಯೋಜನೆ ಮಾಡಿದ್ದು, ಇದರ ಸಮಾರೋಪ ಸಮಾರಂಭ ಜುಲೈ 4 ರಂದು ನಡೆಯಲಿದೆ. ಅಂದು ಕರ್ನಾಟಕದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಭಾಷಣ ಮಾಡಲಿದ್ದಾರೆ.
ಜುಲೈ 4ರ ಶನಿವಾರ ಸಂಜೆ 5ಗಂಟೆಗೆ ಕರ್ನಾಟಕ ಜನಸಂವಾದದ ಸಮಾರೋಪ ಸಮಾರಂಭ ನಡೆಯಲಿದೆ. ಬಿ. ಎಲ್. ಸಂತೋಷ್ ವಿಡಿಯೋ ಕಾನ್ಪರೆನ್ಸ್ ಮೂಲಕ ಸಮಾರಂಭದ ಪ್ರಮುಖ ಭಾಷಣ ಮಾಡಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.