ಕರ್ನಾಟಕ ಲೋಕಾಯುಕ್ತಕ್ಕೆ ಹೆಚ್ಚುವರಿ ರಿಜಿಸ್ಟಾರ್ ನೇಮಕ – ಸಚಿವ ಸಂಪುಟ ಒಪ್ಪಿಗೆ..
ಕರ್ನಾಟಕ ಲೋಕಾಯುಕ್ತಕ್ಕೆ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ ವಾರಗಳ ನಂತರ ಮತ್ತು ಎಸಿಬಿ ತನಿಖೆ ನಡೆಸುತ್ತಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿದ ವಾರಗಳ ನಂತರ ರಾಜ್ಯ ಸರ್ಕಾರ ಈ ನಿರ್ಧಾರ ಬಂದಿದೆ.
ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ನಿಭಾಯಿಸಲು ಹೆಚ್ಚುವರಿ ಸಿಬ್ಬಂದಿಯನ್ನು ಲೋಕಾಯುಕ್ತರು ಕೋರಿದ್ದರು. ಲೋಕಾಯುಕ್ತರ ವೇತನವನ್ನು ಕರ್ನಾಟಕದ ಮುಖ್ಯ ನ್ಯಾಯಮೂರ್ತಿಗಳ ವೇತನಕ್ಕೆ ಸರಿಸಮಾನವಾಗಿ ಹೆಚ್ಚಿಸುವ ನಿರ್ಧಾರವನ್ನೂ ಸಂಪುಟ ಕೈಗೊಂಡಿದೆ.
ಇದರ ಜೊತೆಗೆ ಗೋದಾಮುಗಳ ನಿರ್ಮಾಣವನ್ನು ಪೂರ್ಣಗೊಳಿಸಲು ಮತ್ತು ಮೂಲಸೌಕರ್ಯಗಳನ್ನು ಬಲಪಡಿಸಲು 862.37 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.
Karnataka Lokayukta to have additional registrar, Cabinet decides