ಕಾಂಗ್ರೆಸ್ ಪಾದಯಾತ್ರೆ ಮಾಡಲಿ, ಯಾವುದೇ ಅಡ್ಡಿಯಿಲ್ಲ : ಜೆ.ಸಿ.ಮಾಧುಸ್ವಾಮಿ karnataka minister j.c. madhuswamy cabinet meeting today saaksha tv
ಬೆಂಗಳೂರು : ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡಲಿ, ಅವರಿಗೆ ಯಾವುದೇ ಅಡ್ಡಿಯಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ
ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಇದರ ಬಳಿಕ ಸಂಪುಟ ಸಭೆಯ ಬಗ್ಗೆ ಮಾಹಿತಿ ನೀಡಿದ ಮಾಧುಸ್ವಾಮಿ, ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳದಿಂದಾಗಿ ಜನವರಿ 19 ರವರೆಗೆ ಕೋವಿಡ್ ನಿಯಮಗಳನ್ನು ಜಾರಿ ಮಾಡಲಾಗಿದೆ.
ಆದ್ರೆ ಕೆಲವು ಜಿಲ್ಲೆಗಳಲ್ಲಿ ಈ ನಿಯಮಗಳು ಅಗತ್ಯವಿಲ್ಲ ಎಂಬ ಅಭಿಪ್ರಾಯ ಬಂದಿದೆ. ಹೀಗಾಗಿ ಜನವರಿ 15ಕ್ಕೆ ಮತ್ತೊಂದು ಬಾರಿ ಪರಾಮರ್ಶೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಇದೇ ವೇಳೆ ಕಾಂಗ್ರೆಸ್ ಪಾದಯಾತ್ರೆ ಕುರಿತಂತೆ ಪ್ರಶ್ನೆಗೆ ಉತ್ತರಿಸಿದ ಮಾಧುಸ್ವಾಮಿ, ಕೋವಿಡ್ ನಿಯಮ ಜಾರಿಗೂ, ಕಾಂಗ್ರೆಸ್ ಪಾದಯಾತ್ರೆಗೂ ಯಾವುದೇ ಸಂಬಂಧವಿಲ್ಲ.
ಕೋವಿಡ್ ನಿಯಮ ಎಲ್ಲ ಕಡೆ ಪಾಲನೆ ಮಾಡಲಾಗುತ್ತಿದೆ. ಕಾಂಗ್ರೆಸ್ ಪಾದಯಾತ್ರೆ ಮಾಡಲಿ, ಅವರಿಗೆ ಯಾವುದೇ ಅಡ್ಡಿಯಿಲ್ಲ ಎಂದರು.