ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಕ್ಷಾಂತರ ಆಸ್ತಿ ಮಾಲೀಕರಿಗೆ ‘ಭೂ ಗ್ಯಾರಂಟಿ’: ‘ಬಿ-ಖಾತಾ’ ನಿವೇಶನಗಳಿಗೆ ಪಕ್ಕಾ ‘ಎ-ಖಾತಾ’: ಕೃಷ್ಣ ಬೈರೇಗೌಡ

admin by admin
August 21, 2026
in Newsbeat, State, Uncategorized, ರಾಜ್ಯ
karnataka-apartment-ownership-and-management-bill-2026-krishna-byre-gowda-vidhana-soudha

karnataka-apartment-ownership-and-management-bill-2026-krishna-byre-gowda-vidhana-soudha

Share on FacebookShare on TwitterShare on WhatsappShare on Telegram

• ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026ಕ್ಕೆ ಸದನ ಅನುಮೋದನೆ
• ಅನಧಿಕೃತ ಬಡಾವಣೆಗಳ ರಸ್ತೆಗಳನ್ನು ‘ಸಾರ್ವಜನಿಕ ರಸ್ತೆ’ ಎಂದು ಘೋಷಿಸಲು ಸೆಕ್ಷನ್ 284ಕ್ಕೆ ತಿದ್ದುಪಡಿ
• ಆಸ್ತಿ ಮಾಲೀಕರಿಗೆ ಬ್ಯಾಂಕ್ ಸಾಲ, ಕಟ್ಟಡ ನಕ್ಷೆ ಮಂಜೂರಾತಿ (Plan Approval) ಪಡೆಯಲು ಹಾದಿ ಸುಗಮ

ಬೆಂಗಳೂರು: ರಾಜ್ಯಾದ್ಯಂತ ಕಳೆದ 30-40 ವರ್ಷಗಳಿಂದ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ ಹಾಗೂ ಮನೆಗಳನ್ನು ಹೊಂದಿ, ‘ಬಿ-ಖಾತಾ’ದಿಂದಾಗಿ ಸಂಕಷ್ಟದಲ್ಲಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಸಂಪೂರ್ಣ ಮಾಲೀಕತ್ವದ ಹಕ್ಕು ಕಲ್ಪಿಸಿ, ಪಕ್ಕಾ ‘ಎ-ಖಾತಾ’ ನೀಡುವ ಅತ್ಯಂತ ಮಹತ್ವದ *’ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026’*ಕ್ಕೆ ವಿಧಾನ ಸಭೆ ಅಂಗೀಕಾರ ನೀಡಿದೆ.

Related posts

cm-dk-shivakumar-addresses-icai-chartered-accountants-conference-bengaluru

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

August 21, 2026
karnataka-apartment-ownership-and-management-bill-2026-krishna-byre-gowda-vidhana-soudha

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಕಟ್ಟುನಿಟ್ಟಿನ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

August 21, 2026

ಶುಕ್ರವಾರ ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ವಿವರಣೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಾಜ್ಯದಲ್ಲಿ ಪ್ರತಿಯೊಬ್ಬ ಆಸ್ತಿ ಮಾಲೀಕನಿಗೂ ಸಂಪೂರ್ಣ ಆಸ್ತಿ ಭದ್ರತೆ ನೀಡುವುದು ನಮ್ಮ ಸರ್ಕಾರದ ಹಾಗೂ ಮುಖ್ಯಮಂತ್ರಿಗಳ ‘ಭೂ ಗ್ಯಾರಂಟಿ’ ಸಂಕಲ್ಪವಾಗಿದೆ. ಅನಧಿಕೃತ ಬಡಾವಣೆಗಳ ಮೂಲಭೂತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಗರ ಪಾಲಿಕೆಗಳ ಕಾಯ್ದೆಯ ಸೆಕ್ಷನ್ 284ಕ್ಕೆ ತಿದ್ದುಪಡಿ ತರಲಾಗುತ್ತಿದೆ,” ಎಂದು ತಿಳಿಸಿದರು.

“ಕಳೆದ ಮೂರ್ನಾಲ್ಕು ದಶಕಗಳಿಂದ ರಾಜ್ಯಾದ್ಯಂತ ನಗರ ಭಾಗಗಳಲ್ಲಿ ಹಲವಾರು ಅನಧಿಕೃತ ಬಡಾವಣೆಗಳು ತಲೆ ಎತ್ತಿವೆ. ಅಕ್ರಮ ನಡೆಯುತ್ತಿದೆ ಎಂದು ತಿಳಿದೂ ಸಹ ಈ ಹಿಂದಿನ ಸರ್ಕಾರಗಳು ಅಕ್ರಮಗಳ ತಡೆಗೆ ಮುಂದಾಗಲಿಲ್ಲ, ಕಾನೂನು ಕಡೆಗಣಿಸಿ ಬಡಾವಣೆ ನಿರ್ಮಿಸಬಾರದು ಎಂಬ ಸಾಮಾನ್ಯ ಪ್ರಜ್ಞೆ ಬಡಾವಣೆ ನಿರ್ಮಾಣದಾರರಿಗೂ ಇಲ್ಲದ ಕಾರಣ ಇಂದು ಆಸ್ತಿ ಮಾಲೀಕರಿಗೆ ಹತ್ತಾರು ತೊಂದರೆಗಳು ಎದುರಾಗಿವೆ” ಎಂದು ವಿಷಾದಿಸಿದರು.

“ಅನದೀಕೃತವಾಗಿ ನಿರ್ಮಾಣಗೊಂಡ ನಿವೇಶನಗಳಲ್ಲಿ ಅಗತ್ಯವಿದ್ದಷ್ಟು ಅಗಲ ರಸ್ತೆಗಳಿಲ್ಲ, ರಸ್ತೆಗಳಿಗೆ ಡಾಂಬರೀಕರಣ ಮಾಡಿಲ್ಲ, ವಿದ್ಯುತ್ ಸೌಕರ್ಯ ಕೊಟ್ಟಿಲ್ಲ, ಒಳಚರಂಡಿ ವ್ಯವಸ್ಥೆ ಇಲ್ಲ, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಮಳೆನೀರು ಹೊರಗಡೆ ಹೋಗೋದಕ್ಕೆ ದಾರಿ ಮಾಡಿಲ್ಲ, ಸರಿಯಾಗಿ ಸಂಪರ್ಕ ರಸ್ತೆಗಳೂ ಇಲ್ಲ. ಹೀಗೆ ಅವ್ಯವಸ್ಥೆಗಳ ಆಗರಗಳನ್ನ ನಿರ್ಮಾಣ ಮಾಡಿ ಆ ಮಾಲೀಕರಿಗೆ ಸರಿಯಾಗಿ ಆಸ್ತಿ ಮಾಲೀಕತ್ವವೂ ಸಿಗದಂತಾಗಿದ್ದು, ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ 2024 ರಲ್ಲಿ ನಮ್ಮ ಸರ್ಕಾರ ಬಹಳ ಕಟುವಾದಂತಹ ನಿಲುವನ್ನು ತೆಗೆದುಕೊಳ್ಳಲು ಸಂಕಲ್ಪ ಮಾಡಿದ್ದು, ಇಂತಹ ಅನಧಿಕೃತ ಬಡಾವಣೆಗಳಿಗೆ ಸಂಪೂರ್ಣ ವಿರಾಮವನ್ನ ಹಾಕಿ, ಅಕ್ರಮಗಳನ್ನು ತಡೆಗಟ್ಟೋ ಕೆಲಸ ಮಾಡಿದ್ದೇವೆ. ಇದರ ಜೊತೆಗೆ ದಶಕಗಳ ಹಿಂದೆ ನಿರ್ಮಾಣವಾದ ಬಡಾವಣೆಗಳ ಆಸ್ತಿ ಮಾಲೀಕರಿಗೂ ಸೂಕ್ತ ಪರಿಹಾರ ನೀಡಲು ಮುಂದಾಗಿದ್ದೇವೆ” ಎಂದರು.
“ಈ ಹಿಂದೆ ಅಂತಹ ಆಸ್ತಿ ಮಾಲೀಕರಿಗೆ ಬಿ ಖಾತಾ ನೀಡಲಾಗಿತ್ತು. ಎ ಖಾತಾ ನೀಡಲು ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಆದರೆ, ಎ ಖಾತಾ ಕೊಟ್ಟರೆ ಮಾತ್ರ ಅವರ ಮಾಲೀಕತ್ವದ ಗ್ಯಾರಂಟಿಗೆ ತೂಕವಿರುತ್ತದೆ ಎಂಬ ಕಾರಣಕ್ಕಾಗಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ” ಎಂದು ತಿಳಿಸಿದರು.

ವಿಧೇಯಕದ ಪ್ರಮುಖ ಅಂಶಗಳು:

ಸಾರ್ವಜನಿಕ ರಸ್ತೆ ಎಂದು ಘೋಷಣೆ: ಅನಧಿಕೃತ ಬಡಾವಣೆಗಳನ್ನು ನಿರ್ಮಿಸುವಾಗ ಬಿಡಲಾಗಿರುವ ರಸ್ತೆಗಳು ಈಗಲೂ ಮೂಲ ಜಮೀನು ಮಾಲೀಕರ ಹೆಸರಿನಲ್ಲೇ ಇವೆ. ಹೊಸ ತಿದ್ದುಪಡಿಯ ಪ್ರಕಾರ, ಈ ರಸ್ತೆಗಳನ್ನು ಸ್ಥಳೀಯ ನಗರಪಾಲಿಕೆ ಅಥವಾ ಮುನ್ಸಿಪಾಲಿಟಿ ದಾಖಲೆಗಳಲ್ಲಿ ‘ಸಾರ್ವಜನಿಕ ರಸ್ತೆ’ ಎಂದು ಅಧಿಕೃತವಾಗಿ ಘೋಷಿಸಲು ಕಾನೂನು ಅವಕಾಶ ಸಿಗಲಿದೆ.

ಬಿ-ಖಾತಾದಿಂದ ‘ಎ-ಖಾತಾ’ಗೆ ಬಡ್ತಿ: ರಸ್ತೆಗಳು ಅಧಿಕೃತಗೊಳ್ಳುತ್ತಿದ್ದಂತೆ, ಆ ಬಡಾವಣೆಗಳಲ್ಲಿರುವ ನಿವೇಶನ ಮತ್ತು ಮನೆಗಳಿಗೆ ನಿಯಮಾನುಸಾರ ಪಕ್ಕಾ ‘ಎ-ಖಾತಾ’ ನೀಡಲಾಗುವುದು. ಇದರಿಂದ ಆಸ್ತಿಗೆ ಶೇ.100 ರಷ್ಟು ಪರಿಪಕ್ವ ಮಾಲೀಕತ್ವ ದೊರೆಯಲಿದೆ.

ಸಾರ್ವಜನಿಕರಿಗೆ ಸಿಗುವ ಪ್ರಯೋಜನಗಳು: ಎ-ಖಾತಾ ದೊರೆಯುವುದರಿಂದ ಆಸ್ತಿ ಮಾಲೀಕರಿಗೆ ಬ್ಯಾಂಕುಗಳಿಂದ ಸುಲಭವಾಗಿ ಗೃಹ/ಆಸ್ತಿ ಸಾಲ ಸಿಗಲಿದೆ. ಜೊತೆಗೆ ಕಟ್ಟಡ ನಕ್ಷೆ ಮಂಜೂರಾತಿ (Plan Approval) ಮತ್ತು ವಾಸಯೋಗ್ಯ ಪ್ರಮಾಣಪತ್ರ (Occupancy Certificate – OC) ಪಡೆಯಲು ಇದ್ದ ಅಡೆತಡೆಗಳು ನಿವಾರಣೆಯಾಗಲಿವೆ.

ರಾಜ್ಯಾದ್ಯಂತ ವಿಸ್ತರಣೆ: ಈ ವ್ಯವಸ್ಥೆಯನ್ನು ಈಗಾಗಲೇ ಬೆಂಗಳೂರು ನಗರದಲ್ಲಿ ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ಮುಖ್ಯಮಂತ್ರಿಗಳ ಸೂಚನೆಯಂತೆ ರಾಜ್ಯದ ಎಲ್ಲಾ ನಗರಪಾಲಿಕೆಗಳು, ಪುರಸಭೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ವಿಸ್ತರಿಸಲಾಗುತ್ತಿದೆ.

ಹೊಸ ಅಕ್ರಮಗಳಿಗೆ ತಡೆ: ಹಳೆಯ ಅಕ್ರಮಗಳಿಗೆ ನಿಯಮಾನುಸಾರ ಪರಿಹಾರ ಕಲ್ಪಿಸುವ ಜೊತೆಗೆ, ಭವಿಷ್ಯದಲ್ಲಿ ಯಾವುದೇ ಹೊಸ ಅನಧಿಕೃತ ಬಡಾವಣೆಗಳು ತಲೆಎತ್ತದಂತೆ ಸರ್ಕಾರ ಸಂಪೂರ್ಣ ತಡೆ ಹಾಕಿದೆ.

ದಶಕಗಳಿಂದ ತ್ರಿಶಂಕು ಸ್ಥಿತಿಯಲ್ಲಿದ್ದ ಲಕ್ಷಾಂತರ ಆಸ್ತಿ ಮಾಲೀಕರ ಹಿತದೃಷ್ಟಿಯಿಂದ ತರಲಾದ ಈ ಐತಿಹಾಸಿಕ ತಿದ್ದುಪಡಿಗೆ ಸದನವು ಸರ್ವಾನುಮತದಿಂದ ಅನುಮೋದನೆ ನೀಡಿದೆ.

Tags: #BKhataToAKhata #KarnatakaMunicipalitiesBill2026 #KrishnaByreGowda #BhooGuarantee #PropertyRights #VidhanaSoudha #KarnatakaGovernment #BengaluruNews #KarnatakaNews #RealEstateKarnataka
ShareTweetSendShare
Join us on:

Related Posts

cm-dk-shivakumar-addresses-icai-chartered-accountants-conference-bengaluru

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

by admin
August 21, 2026
0

ಬೆಂಗಳೂರು,  “ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ...

karnataka-apartment-ownership-and-management-bill-2026-krishna-byre-gowda-vidhana-soudha

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಕಟ್ಟುನಿಟ್ಟಿನ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

by admin
August 21, 2026
0

• ಒಂದು ಅಪಾರ್ಟ್ಮೆಂಟ್ ಗೆ ಒಂದೇ ಅಸೋಸಿಯೇಷನ್ • ಸಾಮಾನ್ಯ ಪ್ರದೇಶಗಳ ಮೇಲಿನ ಹಕ್ಕು • ವ್ಯಾಜ್ಯ ಇತ್ಯರ್ಥಕ್ಕೆ ಸಕ್ಷಮ ಪ್ರಾಧಿಕಾರಗಳ ಸ್ಥಾಪನೆ • ಕಟ್ಟಡ ಮರುನಿರ್ಮಾಣಕ್ಕೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

dk-shivakumar-meets-hudco-delegation-in-vidhana-soudha

 ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ HUDCO ಪ್ರತಿನಿಧಿಗಳ ನಿಯೋಗ

by admin
August 21, 2026
0

ರಾಜ್ಯದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಯೋಜನೆಗಳ ಚುರುಕಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಸತಿ ಮತ್ತು ನಗರಾಭಿವೃದ್ಧಿ ನಿಗಮ (HUDCO) ಸಂಸ್ಥೆಯ...

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

by admin
August 21, 2026
0

  ಬೆಂಗಳೂರು - ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram