ರಾಜ್ಯದಲ್ಲಿ ಅರ್ಧ ಲಾಕ್ ಡೌನ್ : ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಅರ್ಧ ಲಾಕ್ ಡೌನ್ ಘೋಷಣೆ ಮಾಡಿದೆ. ಅದರಂತೆ ಅಗತ್ಯ ಸೇವೆ ಬಿಟ್ಟು ಉಳಿದ ಎಲ್ಲ ಅಂಗಡಿಗಳನ್ನ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ.
ಸರ್ಕಾರದ ಹೊಸ ಆದೇಶದ ಅನ್ವಯ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ ರಾತ್ರಿ 9 ಗಂಟೆಯವರೆಗೆ ಕೇವಲ ಅಗತ್ಯ ಸೇವೆಗಳ ಅಂಗಡಿಗಳು ಮಾತ್ರ ತೆರದಿರುತ್ತವೆ. ಹೊಸ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ.
ಯಾವ ಅಂಗಡಿಗಳಿಗೆ ಅನುಮತಿ :
01. ದಿನಸಿ, ಹಣ್ಣು, ತರಕಾರಿ ಡೈರಿ, ಮಾಂಸ, ಔಷಧಿ, ಪ್ರಾಣಿಗಳ ಆಹಾರದ ಅಂಗಡಿಗೆ ಅನುಮತಿ.
02. ಹೋಲ್ ಸೇಲ್ ತರಕಾರಿ, ಹಣ್ಣು ಹೂವು ಅಂಗಡಿ
03. ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಅವಕಾಶ
04. ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ
05. ಬ್ಯಾಂಕ್, ಎಟಿಎಂ ಇನ್ಶುರೆನ್ಸ್ ಕಂಪನಿಗಳಿಗೆ ತೆರೆಯಲು ಅವಕಾಶ
06. ಪೇಪರ್, ಟಿವಿ,ಮೀಡಿಯಾ ಕಂಪನಿಗಳಿಗೆ ತೆರೆಯಲು ಅವಕಾಶ
07. ಇ -ಕಾಮರ್ಸ್ ಸೇವೆಯ ಕಚೇರಿಗಳಿಗೆ ಅವಕಾಶ
08. ಸೇವಾ ಕಚೇರಿ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಗಳ ತೆರೆಯಲು ಅನುಮತಿ
09. ಖಾಸಗಿ ಸೆಕ್ಯೂರಿಟಿ ಏಜೆನ್ಸಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗೆ ಅವಕಾಶ
10. ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿಗೆ ಅವಕಾಶ