ಪ್ರಥಮ ಪಿಯುಸಿ ದಾಖಲಾತಿ ಮಾಡಿಕೊಂಡ್ರೆ ಹುಷಾರ್..!
ಬೆಂಗಳೂರು : ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ 2021 -22ನೇ ಸಾಲಿನ ದಾಖಲಾತಿ ಮಾರ್ಗಸೂಚಿಯನ್ನ ಬಿಡುಗಡೆ ಮಾಡುವವರೆಗೂ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ ಮಾಡಬಾರದು ಎಂದು ಪಿಯುಸಿ ಬೋರ್ಡ್ ಕಾಲೇಜುಗಳಿಗೆ ಎಚ್ಚರಿಕೆ ಸಂದೇಶ ನೀಡಿದೆ.
ರಾಜ್ಯದಲ್ಲಿ 2020-21 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಇನ್ನೂ ಮುಗಿದಿಲ್ಲ. ಆದರೂ ಈಗಾಗಲೇ ಪ್ರತಿಷ್ಠಿತ ಕಾಲೇಜುಗಳು ಪ್ರಥಮ ಪಿಯುಸಿಗೆ ದಾಖಲಾತಿ ಪ್ರಕ್ರಿಯೆ ಪ್ರಾರಂಭ ಮಾಡಿವೆ.
ಈ ಹಿನ್ನೆಲೆ ಮಹತ್ವದ ಆದೇಶ ಹೊರಡಿಸಿರುವ ಪಿಯುಸಿ ಬೋರ್ಡ್, ಪಿಯುಸಿ ಬೋರ್ಡ್ ಮಾರ್ಗಸೂಚಿ ಪ್ರಕಟ ಮಾಡುವವರೆಗೂ 2021-22ನೇ ಸಾಲಿನ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ ಮಾಡಬಾರದು ಅಂತ ಆದೇಶ ಹೊರಡಿಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದಾಖಲಾತಿ ಮಾರ್ಗಸೂಚಿ ಬಿಡುಗಡೆ ಮಾಡಿದ ನಂತರವಷ್ಟೇ ದಾಖಲಾತಿ ಪ್ರಕ್ರಿಯೆ ಪ್ರಾರಂಭ ಮಾಡಬೇಕು.
ಅಲ್ಲದೇ ಆನ್ ಲೈನ್ ತರಗತಿಗಳನ್ನು ಯಾವುದೇ ಕಾರಣಕ್ಕೂ ನಡೆಸಬಾರದು. ಒಂದು ವೇಳೆ ನಿಯಮ ಮೀರಿ ದಾಖಲಾತಿ ನಡೆಸಿದರೆ, ಆನ್ ಲೈನ್ ತರಗತಿ ನೀಡಿದರೆ ಕಾಲೇಜು ಮಾನ್ಯತೆ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದೆ.