ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Rajyotsava – ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾವ್ ಬಗ್ಗೆ ನಿಮಗೆಷ್ಟು ಗೊತ್ತು ?

Mahesh M Dhandu by Mahesh M Dhandu
October 25, 2022
in Newsbeat, State, ಕನ್ನಡ ರಾಜ್ಯೋತ್ಸವ
Karnataka Rajyotsava aluru venkata rao history

Karnataka Rajyotsava aluru venkata rao history

Share on FacebookShare on TwitterShare on WhatsappShare on Telegram

Karnataka Rajyotsava – ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾವ್ ಬಗ್ಗೆ ನಿಮಗೆಷ್ಟು ಗೊತ್ತು ?

ಆಲೂರು ವೆಂಕಟರಾವ್..!! ಕರ್ನಾಟಕದ ಹುಟ್ಟಿಗೆ ಕಾರಣರಾದ ಕನ್ನಡದ ಕುಲಪುರೋಹಿತ ಎಂದೇ ಪ್ರಖ್ಯಾತಿ ಪಡೆದರು. ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905ರಲ್ಲಿ ಪ್ರಾರಂಭಿಸಿದರು.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಆಲೂರು ವೆಂಕಟರಾಯರು ಜೀವನವನ್ನು ಸಂಪೂರ್ಣವಾಗಿ ಏಕೀಕರಣಕ್ಕಾಗಿಯೇ ಮುಡಿಪಾಗಿಟ್ಟವರು. ಕನ್ನಡಿಗರಲ್ಲಿ ಏಕೋಭಾವನೆ ಮೂಡಿಸುವುದಕ್ಕೆ ವಿದಾಯಕ ಕಾರ್ಯಕ್ರಮ ನಡೆಸಿದವರು. ಕರ್ನಾಟಕದ ಇತಿಹಾಸವನ್ನು ವಿಜಯನಗರದ ಸಾಮ್ರಾಜ್ಯದ ಮೂಲಕ ಪ್ರೇರಣೆ ಪಡೆದು ಕನ್ನಡಾಂಬೆಯು ಪ್ರತಿ ಕನ್ನಡಿಗನ ಅತ್ಮದಲ್ಲಿ ಸ್ಥಾಪನೆ ಆದಾಗ ಮಾತ್ರ ನವ ಕರ್ನಾಟಕದ ನಿರ್ಮಾಣ ಸಾಧ್ಯ ಎಂಬುದು ಆಲೂರು ಅವರ ವಿಚಾರವಾಗಿತ್ತು. ಕರ್ನಾಟಕ ವಿದ್ಯಾವರ್ಧಕ ಸಂಘ, ಕಸಾಪ ಸೇರಿದಂತೆ ಇನ್ನಿತರ ಸಂಸ್ಥೆಗಳನ್ನು ಹುಟ್ಟು ಹಾಕಿದ ಕೀರ್ತಿ ವೆಂಕಟರಾಯರಿಗೆ ಸಲ್ಲಬೇಕು

ಮಾತನಾಡುವ ಭಾಷೆ ಬೇರೆ ಇದ್ದರೂ, ಗ್ರಾಂಥಿಕ ಭಾಷೆ ಒಂದೇ ಆಗಿರಬೇಕು. ವೆಂಕಟರಾಯರು ರಾಷ್ಟ್ರೀಯ ಶಾಲೆ ಪ್ರಾರಂಭಿಸಿ ಕನ್ನಡಿಗರಿಗೆ ಸ್ವ ಉದ್ಯೋಗ ಮಾಡುವ ಅವಕಾಶ ಮಾಡಿಕೊಟ್ಟಿದ್ದರು. ಕರ್ನಾಟಕ ಏಕೀಕರಣ ಪರಿಷತ್‌ ಮೂಲಕ ಕರ್ನಾಟಕದ ಏಕೀಕರಣ ಮಾಡುವ ಮಹತ್ಕಾರ್ಯ ಮಾಡಿದ್ದರು. ಆಲೂರು ವೆಂಕಟರಾಯರ ಮೇಲೆ ಟ್ಯಾಗೋರ್‌, ತಿಲಕರು, ಅರವಿಂದರ ಪ್ರಭಾವ ಹೆಚ್ಚಿನದು. ತಮ್ಮ ಬಹುಮುಖ ವ್ಯಕ್ತಿತ್ವದ ಮೂಲಕ ಕನ್ನಡಿಗರನ್ನು ಒಂದುಗೂಡಿಸುವ ಕೆಲಸವನ್ನು ಮಾಡಿದ್ದಾರೆ. ಸಾಹಿತ್ಯ, ಸಂಶೋಧನೆ, ಇತಿಹಾಸ, ಪತ್ರಿಕೋದ್ಯಮ ಹೀಗೆ ವಿವಿಧ ಮಜಲುಗಳಲ್ಲಿ ಅವರು ಕೆಲಸ ಮಾಡಿದ್ದರು

ಕನ್ನಡಕ್ಕಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟ ಆಲೂರು ವೆಂಕಟರಾಯರು ಜನಸಿದ್ದು, ಜುಲೈ 12, 1880ರಂದು ಬಿಜಾಪುರದಲ್ಲಿ. ತಂದೆ ಭೀಮರಾಯರು ಶಿರಸ್ತೇದಾರರು, ತಾಯಿ ಭಾಗೀರಥಿ ಭಾಯಿ. ವೆಂಕಟರಾಯರು ತಮ್ಮ ಆರಂಭಿಕ ಶಿಕ್ಷಣವನ್ನು ಧಾರವಾಡದಲ್ಲಿ ಮುಗಿಸಿದರು.

ಬಳಿಕ 1903ರಲ್ಲಿ ಪುಣೆಯ ಫರ್ಗೂಸನ್ ಕಾಲೇಜಿಲನಲ್ಲಿ ಬಿ ಎ ಪದವಿ ಪಡೆದು ಮುಂಬೈನಲ್ಲಿ ಕಾನೂನಿನ ಅಭ್ಯಾಸ ಮಾಡಿ 1905ರಲ್ಲಿ ವಕೀಲರಾದರು. ಒಮ್ಮೆ ಇವರು ಹಂಪಿಗೆ ಭೇಟಿ ನೀಡಿದ್ದರು. ಅಲ್ಲಿನ ಅವಶೇಷಗಳು ಆಲೂರು ಅವರ ಮೇಲೆ ಅಪೂರ್ಣ ಪರಿಣಾಮ ಬೀರಿದ್ದವು. ಇದೇ ಅವರ ಜೀವನದ ಕ್ರಮದಲ್ಲಿ ಕ್ರಾಂತಿಯನ್ನು ಮಾಡಲಿಕ್ಕೆ ಕಾರಣವಾಯಿತು ಎಂದು ಸ್ವತಃ ವೆಂಕಟರಾಯರೇ ಹೇಳಿಕೊಂಡಿದ್ದಾರೆ.

Karnataka Rajyotsava aluru venkata rao history
Karnataka Rajyotsava aluru venkata rao history

ಇದಾದ ಬಳೀಕ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಪ್ರವೇಶಿಸಿದ ವೆಂಕಟರಾಯರು ವಾಗ್ಬೂಷಣ ಪತ್ರಿಕೆಯ ಸಂಪಾದಕರಾದರು. ಕರ್ನಾಟಕದ ವಿದ್ಯಾವರ್ಧಕರ ಸಂಘದ ಆಶ್ರಯದಲ್ಲಿ ಇವರು ನಡೆಸಿದ ಗ್ರಂಥಕರ್ತರ ಸಮಾವೇಶ 1915ರಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತಿಗೆ ನಾಂದಿಹಾಡಿತು. ಸಾಹಿತ್ಯ ರಚನೆಯನ್ನು ಗಂಭೀರವಾಗಿ ಸ್ವೀಕರಿಸಿದ ಆಲೂರರು ಶಿಕ್ಷಣ ಮೀಮಾಂಸೆ, ಶ್ರೀ ವಿದ್ಯಾರಣ್ಯರ ಚರಿತ್ರೆ, ಕರ್ನಾಟಕ ಗತವೈಭವ, ಸಂಸಾರ ಸುಖ, ಕರ್ನಾಟಕದ ವೀರರತ್ನಗಳು, ಕರ್ನಾಟಕತ್ವದ ಸೂತ್ರಗಳು, ಕರ್ನಾಟಕತ್ವದ ವಿಕಾಸ, ರಾಷ್ಟ್ರೀಯತ್ವ ಮೀಮಾಂಸೆ, ಗೀತಾ ರಹಸ್ಯ, ನಾವು ಈಗ ಬೇಡುವ ಸ್ವರಾಜ್ಯ, ಸ್ವರಾಜ್ಯವೆಂದರೇನು? ಸುಖವೂ ಶಾಂತಿಯೂ, ಸ್ವಾತಂತ್ರ್ಯ ಸಂಗ್ರಾಮ, ಗೀತಾಪ್ರಕಾಶ, ಗೀತಾ ಪರಿಮಳಾ ಸೇರಿದಂತೆ ಮುಂತಾದವುಗಳನ್ನು ಪ್ರಕಟಿಸಿದರು. 1922ರಲ್ಲಿ ಜಯಕರ್ನಾಟಕ ಪತ್ರಿಕೆಯನ್ನು ಸ್ಥಾಪಿಸಿದರು. ಅವರ ಸಂಪಾದಕೀಯ “ ಕಚ್ಚಾ ಲೇಖಕರಿಗೂ, ಕಚ್ಚಾ ಕವಿಗಳಿಗೂ, ಅಶುದ್ಧ ಬರಹಗಳಿಗೂ ಆಸ್ಪದಕೊಟ್ಟಿರುವೆ. ಕರ್ನಾಟಕದ ಸಕಲ ಭಾಗಗಳಲ್ಲಿಯೂ ಲೇಖಕರು ಕವಿಗಳು ಹುಟ್ಟಬೇಕೆಂಬುದೇ ನನ್ನ ಉದ್ದೇಶ.

ಈ ನಡುವೆ ಅವರು ಮಹಾತ್ಮ ಗಾಂಧಿಜೀ, ಬಾಲಗಂಗಾಧರ ತಿಲಕ, ವೀರ ಸಾವರ್ಕರ್ ಇಂತಹ ಮಹಾರಾಷ್ಟ್ರೀಯ ನಾಯಕರೊಡನೆ ತೀರ ನಿಕಟ ಸಂಪರ್ಕ ಹೊಂದಿದ್ದರು. 1931ರಲ್ಲಿ ಬ್ರಿಟಿಷ್ ಸರ್ಕಾರ ಅವರಿಗಾಗಿ ಸರ್ಚ್ ವಾರೆಂಟ್ ಅನ್ನು ಹೊರಡಿಸಿತು. ಹಾಗೆ ಅವರನ್ನು ಸೆರೆ ಹಿಡಿದು ಕಲಘಟಗಿಯಲ್ಲಿ ದಿಗ್ಭಂದದಲ್ಲಿ ಇರಿಸಲಾಗಿತ್ತು. ವರ ಕವಿ ದ.ರಾ.ಬ್ರೇಂದ್ರೆ ಅವರು ಆಲೂರು ಅವರನ್ನು ಕರ್ನಾಟಕದ ಪ್ರಾಣೋಪಾಸಕರು ಎಂದು ಕರೆದಿದ್ದರು.

ಅಂತಿಮವಾಗಿ ಆಲೂರರು ಫೆಬ್ರವರಿ 25, 1964ರಲ್ಲಿ ನಿಧನರಾದರು. ನಾವು ಇಂದು ಕನ್ನಡದ ಅಮೃತಸುಧೆಯನ್ನು ಸವಿದಿದ್ದರೆ ಅದು ಆಲೂರು ವೆಂಕಟರಾಯರಂತಹ ಮಹನೀಯರಯ ನಮಗೆ ನೀಡಿದ ತೀರ್ಥಪ್ರಸಾದ.  

Tags: #Saaksha TValuru venkata raokarnataka rajyotsava
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram