ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಐದನೇ ಸ್ಥಾನ : ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು : ಆತ್ಮಹತ್ಯೆಯಲ್ಲಿ ಕರ್ನಾಟಕವು 5ನೇ ಸ್ಥಾನಕ್ಕೆ ಏರಿರುವುದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತವೇ ನೇರ ಕಾರಣ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಆತ್ಮಹತ್ಯೆಗಳಿಗೆ ಆರ್ಥಿಕ ಅಸ್ಥಿರತೆ, ಭವಿಷ್ಯದ ಬಗೆಗಿನ ಅತಂತ್ರ ಭಾವ, ನಿರುದ್ಯೋಗದ ಆತಂಕ, ಸಾಮಾಜಿಕ ವ್ಯವಸ್ಥೆಗಳು ಪ್ರಮುಖ ಕಾರಣವಾಗುತ್ತವೆ. ಆತ್ಮಹತ್ಯೆಯಲ್ಲಿ ಕರ್ನಾಟಕವು 5ನೇ ಸ್ಥಾನಕ್ಕೆ ಏರಿರುವುದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತವೇ ನೇರ ಕಾರಣ. ಈ ಸಂತೋಷಕ್ಕಾಗಿ #BJPBrashtotsava ನಡೆಸುತ್ತಿರುವುದೇ ಬಿಜೆಪಿ?
ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರಂತೆ! ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ ಬಸವರಾಜ ಬೊಮ್ಮಾಯಿ ಅವರೇ? ಹಗಲಿಡೀ #BJPBrashtotsava ದ ಕೆಲಸ, ರಾತ್ರಿ ಕಾಟಾಚಾರದ ಭೇಟಿಯೇ? ನಿಮ್ಮ ಮಂತ್ರಿಗಳೆಲ್ಲ ಎಲ್ಲಿ ಹೋದರು? ಬರೀ ವೀಕ್ಷಣೆ ಮಾಡುವ ಬದಲು ಪರಿಹಾರದ ಪ್ಯಾಕೇಜ್ ಘೋಷಿಸುವುದು ಯಾವಾಗ?
ಸರ್ಕಾರ ಕೋವಿಡ್ನಿಂದ ಮೃತರಾದವರ ಸಮಾಧಿಗಳ ಮೇಲೆ #BJPBrashtotsava ನಡೆಸಲು ಮುಂದಾಗಿದೆ.
ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನಸ್ಪಂದನ ಸಮಾವೇಶದ ಖರ್ಚು ವೆಚ್ಚದ ಹೊಣೆ ಹೊತ್ತಿರುವ ಆರೋಗ್ಯ ಸಚಿವ ಸುಧಾಕರ್ ಅವರು ಕೋವಿಡ್ ಹೆಣಗಳ ಮೇಲೆ ಮಾಡಿದ ಹಣವನ್ನು ಇಲ್ಲಿ ಚೆಲ್ಲುತ್ತಿದ್ದಾರೆ.
ಈ ಸಮಾವೇಶಕ್ಕೆ ಕೋವಿಡ್ ಮೃತರ ಶಾಪ ತಟ್ಟುವುದು ನಿಶ್ಚಿತ.
— Karnataka Congress (@INCKarnataka) September 9, 2022
ಸರ್ಕಾರ ಕೋವಿಡ್ನಿಂದ ಮೃತರಾದವರ ಸಮಾಧಿಗಳ ಮೇಲೆ #BJPBrashtotsava ನಡೆಸಲು ಮುಂದಾಗಿದೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನಸ್ಪಂದನ ಸಮಾವೇಶದ ಖರ್ಚು ವೆಚ್ಚದ ಹೊಣೆ ಹೊತ್ತಿರುವ ಆರೋಗ್ಯ ಸಚಿವ ಸುಧಾಕರ್ ಅವರು ಕೋವಿಡ್ ಹೆಣಗಳ ಮೇಲೆ ಮಾಡಿದ ಹಣವನ್ನು ಇಲ್ಲಿ ಚೆಲ್ಲುತ್ತಿದ್ದಾರೆ. ಈ ಸಮಾವೇಶಕ್ಕೆ ಕೋವಿಡ್ ಮೃತರ ಶಾಪ ತಟ್ಟುವುದು ನಿಶ್ಚಿತ.

ಕೋವಿಡ್ಗೆ ಜನರನ್ನು ಬಲಿಕೊಟ್ಟು, ಕರೊನಾ ಹೆಸರಲ್ಲಿ ಲೂಟಿ ಮಾಡಿದ ಪಾಪದ ಹಣದಲ್ಲಿ #BJPBrashtotsava ನಡೆಯುತ್ತಿದೆ. ನಿಗದಿಯಂತೆ ಸಮಾವೇಶ ನಡೆಸಲಾಗದ ವಿಘ್ನಗಳು, ಮೂರ್ ಮೂರು ಭಾರಿ ದಿನಾಂಕ ಬದಲಾವಣೆ. ಸಮಾವೇಶದ ಹೆಸರು ಬದಲಾವಣೆ. ಇವೆಲ್ಲವೂ ಕೋವಿಡ್ನಿಂದ ನರಳಿದವರ ಶೋಕದ ಫಲವಲ್ಲವೇ? ಪಾಪದ ಹಣದ ಶಾಪವಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.