Karnataka Ratna : ಅಪ್ಪು ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ…
ಕನ್ನಡ ಚಿತ್ರರಂಗದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ರಾಜ್ಯ ಸರ್ಕಾರ ಗೌರವಿಸಿದೆ. 67 ನೇ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ದಿವಂಗತ ನಟ ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿಯನ್ನು ಸ್ವೀಕರಿಸಿ, ಭಾವುಕರಾದರು. ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಪುನೀತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದು, ಸಿನಿಮಾ ರಂಗದಿಂದ ಇಂಥದ್ದೊಂದು ಗೌರವಕ್ಕೆ ಪಾತ್ರರಾದ ಎರಡನೇ ಗಣ್ಯವ್ಯಕ್ತಿ ಇವರಾಗಿದ್ದಾರೆ.
ಇದೇ ಕುಟುಂಬದ ಡಾ ರಾಜ್ ಕುಮಾರ್ ಗೆ ಮೊದಲ ಭಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಅವರ ನೆಚ್ಚಿನ ನಟರಾಗಿದ್ದ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಗೆಳೆಯ ಮತ್ತು ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಸುಧಾಮೂರ್ತಿ ಅವರು ಅತಿಥಿಗಳಾಗಿ ಆಗಮಿಸಿದ್ದರು.
Karnataka Ratna: Karnataka Ratna Award to Appu