Speaker Kageri : ಚುನಾವಣಾ ಸುಧಾರಣೆ ಬಗ್ಗೆ ಮಾತನಾಡುವಾಗ ಭಾವುಕರಾದ ಕಾಗೇರಿ
ಚುನಾವಣಾ ಸುಧಾರಣೆ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭಾವುಕರಾಗಿದ್ದಾರೆ. ಚುನಾವಣಾ ಸುಧಾರಣೆ ಬಹಳ ದೊಡ್ಡ ಜವಾಬ್ದಾರಿ.. ಇದರ ಗಾಂಭೀರ್ಯತೆ ಗೊತ್ತಿರೋದ್ರಿಂದ ಸದನದಲ್ಲಿ ಚರ್ಚೆ ಮಾಡೋದು ಅಗತ್ಯ… ರೆಗ್ಯೂಲರ್ ಬಿಸಿನೆಸ್ ನ್ನ ಬದಿಗಿಟ್ಟು ಇದನ್ನ ಚರ್ಚೆ ಮಾಡೋದಿಲ್ಲ. ಸಂವಿಧಾನದ ಬಗ್ಗೆ ಚರ್ಚೆ ಮಾಡಿದ್ದೇವೆ.. ಎಷ್ಟು ಒಳ್ಳೆಯ ಚರ್ಚೆ ಮಾಡಿದ್ದೇವೆ… ಎಷ್ಟು ಸದಸ್ಯರು ಸಂತೋಷ ಪಟ್ಟರು..ಬೇರೆ ಬೇರೆ ವಿಚಾರಗಳ ಬಗ್ಗೆ ಮುಕ್ತವಾಗಿ ಚರ್ಚಿಸುವ ಸ್ವಾಭವ ನಮ್ಮದಾಗಬೇಕು… ಬಸವಣ್ಣನ ನಾಡಿನವರು ನಾವು ಅನುಭವ ಮಂಟಪದಲ್ಲಿ ಚರ್ಚೆಯಾಗಿತ್ತು..
ಮುಕ್ತವಾದ ವೇದಿಕೆಗಳು ಚರ್ಚೆಗಳು ಅಗಬೇಕು.. ಕೇವಲ ದೋಷಾರೋಪಣೆ ಮತ್ತು ಟೀಕೆಗಳು ಆಗಬಾರದು… ವ್ಯವಸ್ಥೆಗಳ ರೂಪಿಸೋದಕ್ಕೆ ನಮ್ಮ ಜವಾಬ್ದಾರಿ ಅರ್ಥ ಮಾಡಿಕೊಳ್ಳಬೇಕು… ಸೃಷ್ಟಿಯ ಸತ್ಯದ ಅರಿವನ್ನ ಮುಡಿಸಿಕೊಳ್ಳುವ ಹಂತಕ್ಕೆ ಹೋಗಬೇಕು.. ಇಂಗ್ಲಿಷ್ ಬ್ರಿಟಿಷ್ ಶಿಕ್ಷಣದ ಪದ್ದತಿಯಿಂದ ನಮ್ಮ ಜೀವನದ ನಂಬಿಕೆಗಳೇ ಇಲ್ಲ.. ನಮ್ಮ ಸಾರ್ಥಕತೆಯೇ ಇಲ್ಲದಂತೆ ಆಗಿದೆ. ನಂಬಿಕೆಗಳು ಮತ್ತು ವಿಶ್ವಾಸಗಳು ಬರದೆ ಹೋದರೆ ಈ ವ್ಯವಸ್ಥೆಯನ್ನ ಚನ್ನಾಗಿ ನಡೆಸಲು ಸಾಧ್ಯವಿಲ್ಲ. ಯಾವ ವ್ಯವಸ್ಥೆಯಲ್ಲಿ ನಾವು ಇದ್ದೇವೆ ಸರಿಯಾಗಿ ನಡೆಸಬೇಕು ಎಂದಾದರೆ ನಮ್ಮ ಜ್ಞಾನ ವಿಸ್ತಾರಗಿಳಿಸಯವ ಪ್ರಯತ್ನವಾಗಬೇಕು ಎಂದಿದ್ದಾರೆ..
karnataka : ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಚರ್ಚೆ ವಿಚಾರ , ಸ್ಪೀಕರ್ ವಿಶ್ವನಾಥ್ ಕಾಗೇರಿ ಪ್ರತಿಕ್ರಿಯೆ








